ADVERTISEMENT

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಬಂಧನಕ್ಕೆ ಒತ್ತಾಯಿಸಿ ರಸ್ತೆ ತಡೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2023, 4:16 IST
Last Updated 21 ಮಾರ್ಚ್ 2023, 4:16 IST
ಗೋಣಿಕೊಪ್ಪಲು ಬಳಿಯ ತಿತಿಮತಿಯಲ್ಲಿ ದಲಿತ ಸಂಘರ್ಷ ಸಮಿತಿ ಹಾಗೂ ವಿವಿಧ ಪ್ರಗತಿ ಪರ ಸಂಘಟನೆಯ ಕಾರ್ಯಕರ್ತರು ಅಂಬೇಡ್ಕರ್ ಭಾವಚಿತ್ರಕ್ಕೆ ಮಾಡಿದ ಅಪಮಾನ ಖಂಡಿಸಿ ರಸ್ತೆ ತಡೆ ನಡೆಸಿದರು
ಗೋಣಿಕೊಪ್ಪಲು ಬಳಿಯ ತಿತಿಮತಿಯಲ್ಲಿ ದಲಿತ ಸಂಘರ್ಷ ಸಮಿತಿ ಹಾಗೂ ವಿವಿಧ ಪ್ರಗತಿ ಪರ ಸಂಘಟನೆಯ ಕಾರ್ಯಕರ್ತರು ಅಂಬೇಡ್ಕರ್ ಭಾವಚಿತ್ರಕ್ಕೆ ಮಾಡಿದ ಅಪಮಾನ ಖಂಡಿಸಿ ರಸ್ತೆ ತಡೆ ನಡೆಸಿದರು   

ಗೋಣಿಕೊಪ್ಪಲು: ಪಟ್ಟಣದಲ್ಲಿ ಈಚಿಗೆ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಕೃಷ್ಣಪ್ಪ ಬೆಳ್ಳೂರು ಅವರ ನೇತೃತ್ವದಲ್ಲಿ ಸೋಮವಾರ ತಿತಿಮತಿಯಲ್ಲಿ ರಸ್ತೆ ತಡೆ ನಡೆಸಲಾಯಿತು.

‘ಸುಮಾರು ಒಂದು ಗಂ ನಡೆದ ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿಯ ನೂರಾರು ಕಾರ್ಯಕರ್ತರು ಹಾಗೂ ಪ್ರಗತಿಪರ ಹೋರಾಟಗಾರರು ಬಿಜೆಪಿ ಸರ್ಕಾರ ದಲಿತ ವಿರೋಧಿ ನೀತಿ ತಾಳಿದ್ದು ದಲಿತರ ದಮನ ನೀತಿ ಅನುಸರಿಸುತ್ತಿದೆ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಗೊಳಿಸಿದ್ದರೂ ಆ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರು ಈ ಬಗ್ಗೆ ಕಿಂಚಿತ್ತೂ ವಿಷಾದ ವ್ಯಕ್ತಪಡಿಸುತ್ತಿಲ್ಲ’ ಎಂದು ಹೋರಾಟಗಾರರಾದ ಕೃಷ್ಣಪ್ಪ ದೂರಿದರು.

‘ಸಂವಿಧಾನಾತ್ಮಕವಾಗಿ ಲಭಿಸಿದ್ದ ದಲಿತರ ವಿವಿಧ ಸವಲತ್ತುಗಳನ್ನು ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರ ಕಸಿದುಕೊಳ್ಳುತ್ತಿದೆ. ಇದರ ವಿರುದ್ಧ ಸಂಘಟನಾತ್ಮಕ ಹೋರಾಟ ನಡೆಸದಿದ್ದರೆ ದಲಿತರ ಮತ್ತು ಅಲ್ಪಸಂಖ್ಯಾತರ ಬದುಕು ಶೋಚನೀಯವಾಗಲಿದೆ. ದಲಿತರ ವಿರೋಧಿ ಬಿಜೆಪಿ ವಿರುದ್ಧ ಎಲ್ಲ ದಲಿತ ನಾಯಕರು, ಪ್ರಗತಿಪರ ಚಿಂತಕರು ಒಕ್ಕೊರಲಿನಿಂದ ಹೋರಾಟ ನಡುಸುವುದು ಅನಿವಾರ್ಯವಾಗಿದೆ’ ಎಂದು ಹೇಳಿದರು.

ADVERTISEMENT

ಸ್ಥಳಕ್ಕೆ ಬಂದ ತಹಶೀಲ್ದಾರ್ ಎನ್.ಎಸ್.ಪ್ರಶಾಂತ್ ಮನವಿ ಪತ್ರ ಸ್ವೀಕರಿಸಿದ ನಂತರ ರಸ್ತೆ ತಡೆ ಹಿಂದಕ್ಕೆ ಪಡೆಯಲಾಯಿತು.

ಮಹಿಳಾ ಮತ್ತು ಮಕ್ಕಳ ಸಂರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷೆ ಪಡಿಕಲ್ ಕುಸುಮಾವತಿ, ರಜನಿ, ಸಾಮಾಜಿಕ ಹೋರಾಟಗಾರ ಅಬ್ದುಲ್ ರೆಹಮಾನ್ ಬಾಪು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.