ADVERTISEMENT

ಎರಡು ತಲೆ ಹಾವು ಮಾರಾಟಕ್ಕೆ ಯತ್ನ: ನಾಲ್ವರ ಬಂಧನ

​ಪ್ರಜಾವಾಣಿ ವಾರ್ತೆ
Published 4 ಜುಲೈ 2021, 8:33 IST
Last Updated 4 ಜುಲೈ 2021, 8:33 IST
ವಿರಾಜಪೇಟೆಯ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳವು ಎರಡು ತಲೆಯ ಹಾವನ್ನು ಅಕ್ರಮವಾಗಿ ಮಾಡಲು ಯತ್ನಿಸುತಿದ್ದ ನಾಲ್ವರನ್ನು ಬಂಧಿಸಿದೆ
ವಿರಾಜಪೇಟೆಯ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳವು ಎರಡು ತಲೆಯ ಹಾವನ್ನು ಅಕ್ರಮವಾಗಿ ಮಾಡಲು ಯತ್ನಿಸುತಿದ್ದ ನಾಲ್ವರನ್ನು ಬಂಧಿಸಿದೆ   

ವಿರಾಜಪೇಟೆ: ಎರಡು ತಲೆ ಹಾವನ್ನು ಅಕ್ರಮವಾಗಿ ಮಾರಲು ಯತ್ನಿಸುತಿದ್ದ ನಾಲ್ವರನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದವರು ಗುರುವಾರ ಬಂಧಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಹದಡಿ ಗ್ರಾಮದ ಎಸ್.ಎಚ್. ಶಿವಕುಮಾರ್, ಗದಗ ಜಿಲ್ಲೆಯ ಶಿರಹಟ್ಟಿಯ ಮಲ್ಲಿಕ್ ಸಾಬ್ಹೊಂಟಿ, ಹಾವೇರಿ ಜಿಲ್ಲೆಯ ಬಂಕಾಪುರ ಗ್ರಾಮದ ಮಹಮ್ಮದ್ ಖಾಸಿಂ ಮಕಂದರ್ ಹಾಗೂ ಮಜಾರ್ ಸತ್ತರ್ ಶೇಖ್ ಬಂಧಿತ
ಆರೋಪಿಗಳು.

ಎರಡು ತಲೆಯ ಹಾವನ್ನುದಾವಣಗೆರೆಯಿಂದ ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿರುವ ಖಚಿತ ಮಾಹಿತಿ ಪಡೆದ ಅರಣ್ಯ ಸಂಚಾರಿ ದಳ ಕಾರ್ಯಚರಣೆ ನಡೆಸಿದೆ.

ADVERTISEMENT

ಗೋಣಿಕೊಪ್ಪಲು ಸಮೀಪದ ದೇವರಪುರ ಗ್ರಾಮ ವ್ಯಾಪ್ತಿಯಲ್ಲಿ ಜು.1 ರಂದು ಕಾರನ್ನು ತಡೆದು ತಪಾಸಣೆ ನಡೆಸಿ ಎರಡು ತಲೆಯ ಹಾವು ಹಾಗೂ ಕಾರನ್ನು ವಶಕ್ಕೆ ಪಡೆದ ಅಧಿಕಾರಿಗಳು ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಕ್ಕೆ ಹಾಜರುಪಡಿಸಿದರು.

ಬಂಧಿತ ಆರೋಪಿಗಳನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಅಧೀಕ್ಷಕ ಸುರೇಶ್ ಬಾಬು ಅವರ ಮಾರ್ಗದರ್ಶನದಲ್ಲಿ ವಿರಾಜಪೇಟೆ ತಾಲ್ಲೂಕು ಘಟಕದ ಉಪನಿರೀಕ್ಷಕಿ ವೀಣಾ ನಾಯಕ್, ಸಿಬ್ಬಂದಿಗಳಾದ ಕೆ.ಬಿ. ಸೋಮಣ್ಣ, ಟಿ.ಪಿ.ಮಂಜುನಾಥ್, ಪಿ.ಬಿ.ಮೊಣ್ಣಪ್ಪ, ಎಂ.ಬಿ.ಗಣೇಶ್, ಎಸ್.ಎಂ. ಯೋಗೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.