ADVERTISEMENT

ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ

​ಪ್ರಜಾವಾಣಿ ವಾರ್ತೆ
Published 19 ಜುಲೈ 2021, 6:21 IST
Last Updated 19 ಜುಲೈ 2021, 6:21 IST

ಮಡಿಕೇರಿ: ತಾಲ್ಲೂಕಿನ ಚೇರಂಬಾಣೆಯಲ್ಲಿ ಮಣ್ಣಿನಡಿ ಸಿಲುಕಿದ್ದ ಇಬ್ಬರು ಕಾರ್ಮಿಕರ ಮೃತದೇಹವನ್ನು ಭಾನುವಾರ ಬೆಳಿಗ್ಗೆ ಹೊರಕ್ಕೆ ತೆಗೆಯಲಾಗಿದೆ.

ಹುಬ್ಬಳ್ಳಿಯ ಸಂತೋಷ್ (27), ಪ್ರವೀಣ್ (21) ಮೃತಪಟ್ಟ ಕಾರ್ಮಿಕರು.

ಗ್ರಾಮದಲ್ಲಿ ತಡೆಗೋಡೆ ಕಾಮಗಾರಿ ನಡೆಯುತ್ತಿತ್ತು. ಕಾಂಕ್ರೀಟ್ ಸುರಿಯುತ್ತಿದ್ದ ವೇಳೆ, ಕಾಂಕ್ರೀಟ್ ಮಿಶ್ರಣ ಲಾರಿ ನಿಂತಿದ್ದ ಸ್ಥಳದಲ್ಲಿ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಿಲುಕಿದ್ದರು. ಏಳು ಮಂದಿ ಕಾರ್ಮಿಕರು ಅಪಾಯದಿಂದ ಪಾರಾಗಿದ್ದರು.

ADVERTISEMENT

ಈ ಭಾಗದಲ್ಲಿ ಸುರಿಯುತ್ತಿದ್ದ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ ಅಡಚಣೆ ಉಂಟಾಗಿತ್ತು. ಮಳೆ ನಿಂತ ಮೇಲೆ ಶನಿವಾರ ಮಧ್ಯರಾತ್ರಿಯಿಂದ ಮತ್ತೆ ಕಾರ್ಯಾಚರಣೆ ಆರಂಭಿಸಿ, ಮೃತದೇಹ ಹೊರಕ್ಕೆ ತೆಗೆಯಲಾಗಿದೆ.

ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.