ADVERTISEMENT

ಕುಕ್ಕೆ ಸುಬ್ರಹ್ಮಣ್ಯ: ಸೇವೆಗಳು ಆರಂಭ

ಸರ್ಪಸಂಸ್ಕಾರ, ಆಶ್ಲೇಷ ಬಲಿಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2021, 21:43 IST
Last Updated 20 ಸೆಪ್ಟೆಂಬರ್ 2021, 21:43 IST

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಎಲ್ಲ ಸೇವೆಗಳನ್ನು ನಿಗದಿತ ಸಂಖ್ಯೆಯಲ್ಲಿ ನಡೆಸಲು ಮತ್ತು ಕೋವಿಡ್‌ ಮುಂಜಾಗ್ರತೆಯೊಂದಿಗೆ ಭಕ್ತರ ಮುಕ್ತಪ್ರವೇಶಕ್ಕೆ ಅನುಮತಿ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ದಿನಕ್ಕೆ 100 ಸರ್ಪ ಸಂಸ್ಕಾರ, 20 ನಾಗಪ್ರತಿಷ್ಠೆ, 4 ಪಂಚಾಮೃತ ಅಭಿಷೇಕಕ್ಕೆ ಅವಕಾಶ ನೀಡಲಾಗಿದೆ. ಪ್ರತಿ ಸೇವೆಯಲ್ಲಿ ಇಬ್ಬರಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಆಶ್ಲೇಷ ಬಲಿ ಸೇವೆಯು ಪ್ರತಿ ದಿನ ನಾಲ್ಕು ಪಾಳಿಗಳಲ್ಲಿ ನಡೆಯಲಿದ್ದು, ಒಂದು ಪಾಳಿಯಲ್ಲಿ 70 ಸೇವೆಗಳಿಗೆ ಅವಕಾಶ ನೀಡಲಾಗಿದೆ. ಆಶ್ಲೇಷ ಬಲಿಯು ಬೆಳಿಗ್ಗೆ 7ರಿಂದ 8.15, 8.30ರಿಂದ 9.45, 10ರಿಂದ 11.15 ಹಾಗೂ ಸಂಜೆ 5ರಿಂದ 6.30ರ ಸಮಯದಲ್ಲಿ ನಡೆಯಲಿದೆ.

2020ರಿಂದ ಮುಂಗಡ ಬುಕ್ಕಿಂಗ್ ಆಗಿರುವ ಸರ್ಪಸಂಸ್ಕಾರ ಸೇವಾ ಭಕ್ತರಿಗೆ ಆದ್ಯತೆ ನೀಡಲಾಗಿದೆ. ಸರ್ಪ ಸಂಸ್ಕಾರ ಸೇರಿದಂತೆ ಪ್ರಮುಖ ಸೇವೆಗಳಲ್ಲಿ ಭಾಗವಹಿಸುವ ವ್ಯಕ್ತಿಗಳು ಕೋವಿಡ್‌ ತಡೆ ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣ ಪತ್ರ ಮತ್ತು ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಸಲ್ಲಿಸುವುದು ಕಡ್ಡಾಯಗೊಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.