ADVERTISEMENT

ಮೋದಿ ಜನುಮ ದಿನ: ಮುಖಂಡರಿಂದ ರಕ್ತದಾನ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2022, 11:12 IST
Last Updated 17 ಸೆಪ್ಟೆಂಬರ್ 2022, 11:12 IST
ಬಿಜೆಪಿ ಯುವ ಮೋರ್ಚಾ ವಿಜಯಪುರ ನಗರ ಮಂಡಲದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಅಂಗವಾಗಿ ರಕ್ತದಾನ ಶಿಬಿರ ನಡೆಯಿತು
ಬಿಜೆಪಿ ಯುವ ಮೋರ್ಚಾ ವಿಜಯಪುರ ನಗರ ಮಂಡಲದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಅಂಗವಾಗಿ ರಕ್ತದಾನ ಶಿಬಿರ ನಡೆಯಿತು   

ವಿಜಯಪುರ: ಬಿಜೆಪಿಯುವ ಮೋರ್ಚಾ ವಿಜಯಪುರ ನಗರ ಮಂಡಲದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಅಂಗವಾಗಿ ರಕ್ತದಾನ ಶಿಬಿರ ನಡೆಯಿತು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ ಮಾತನಾಡಿ, ಪ್ರಧಾನಿಯವರ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಮೋದಿಯವರ ಜೀವನ, ಅವರು ನಡೆದುಕೊಂಡು ಬಂದ ದಾರಿ ನಮಗೆಲ್ಲರಿಗೂ ಸ್ಪೂರ್ತಿ ಮತ್ತು ಪ್ರೇರಣೆಯಾಗಿದೆ ಎಂದರು.

ಪ್ರಧಾನಿಯಾದ8 ವರ್ಷಗಳ ಕಾಲ ಅನೇಕ ಅಭಿವೃದ್ಧಿ ಯೋಜನೆಗಳು ಮಾಡಿದ್ದು, ದೇಶದಲ್ಲಿ ಆದ ಅನೇಕ ಬದಲಾವಣೆ ಇಡೀ ವಿಶ್ವವನ್ನೇ ಗಮನ ಸೆಳೆದಿದೆ ಎಂದು ಹೇಳಿದರು.

ADVERTISEMENT

ನಗರ ಮಂಡಲದ ಅಧ್ಯಕ್ಷ ಮಳುಗೌಡ ಪಾಟೀಲ ಮಾತನಾಡಿ ಕೇಂದ್ರದ ಯೋಜನೆಗಳನ್ನು, ಅಭಿವೃದ್ಧಿ ಕೆಲಸಗಳನ್ನು ಜನರ ಮನೆಗೆ ಕಾರ್ಯಕರ್ತರುತಲುಪಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಹೂಗಾರ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಲಿಂಬೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಚಂದ್ರಶೇಖರ ಕವಟಗಿ, ಬೆಳಗಾವಿ ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೂಟ,ಡಾ. ಬಾಬು ರಾಜೇಂದ್ರ ನಾಯಕ, ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಜೋಗೂರ, ಶಿವರುದ್ರ ಬಾಗಲಕೋಟ, ಕೃಷ್ಣಾ ಗುನಾಳಕರ, ಬಸವರಾಜ ಬೈಚಬಾಳ, ಸತೀಶ ಪಾಟೀಲ, ಛಾಯ ಮಶನ್ನವರ, ಮಲ್ಲಮ್ಮ ಜೋಗೂರ, ಭಾರತಿ ಭುಯ್ಯಾರ, ಉಮೇಶ ಕಾರಜೋಳ, ರವಿಕಾಂತ ಬಗಲಿ, ಭೀಮಾಶಂಕರ ಹದನೂರ, ಸುರೇಶ ಬಿರಾದಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.