ADVERTISEMENT

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಕ್ರಾಂತಿಕಾರಕ ಬದಲಾವಣೆ: ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2021, 8:54 IST
Last Updated 7 ಸೆಪ್ಟೆಂಬರ್ 2021, 8:54 IST
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ರಾಷ್ಟ್ರೀಯ ಶಿಕ್ಷಣ ಅನುಷ್ಠಾನ ಕಾರ್ಯಾಗಾರವನ್ನು ಉದ್ಘಾಟಿಸಿದರು.
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ರಾಷ್ಟ್ರೀಯ ಶಿಕ್ಷಣ ಅನುಷ್ಠಾನ ಕಾರ್ಯಾಗಾರವನ್ನು ಉದ್ಘಾಟಿಸಿದರು.   

ಮೈಸೂರು: ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಸುಧಾರಣೆಗಳನ್ನು ತರಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಶಿಕ್ಷಣ ಅನುಷ್ಠಾನ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಇನ್ ಸ್ಟಿಟ್ಯೂಷನ್ ಡೆವಲೆಪ್ ಮೆಂಟ್ ಪ್ಲಾನ್ ನ್ನು ಗಂಭೀರವಾಗಿ ಪರಿಗಣಿಸಿ ಯೋಜನೆ ರೂಪಿಸಿ. ಖಾಸಗಿ ಕಾಲೇಜುಗಳೂ ಸರ್ಕಾರಿ ಕಾಲೇಜುಗಳನ್ನು ಅನುಸರಿಸುವಂತೆ ಮಾಡಬೇಕು ಎಂದು ಹೇಳಿದರು.

ADVERTISEMENT

ವಿದ್ಯಾರ್ಥಿ ಕೇಂದ್ರೀತವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಇದೆ. ಇದನ್ನು ಹಂತಹಂತವಾಗಿ ಅನುಷ್ಠಾನ ಮಾಡುವ ಮೂಲಕ ಮುಂಬರುವ ದಿನಗಳಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ಮಾಡಲಾಗುವುದು ಎಂದು ತಿಳಿಸಿದರು.

ಈಗ ಕೇವಲ ಶೈಕ್ಷಣಿಕ ಸುಧಾರಣೆಗಳನ್ನು ಮಾತ್ರ ಕೈಗೆತ್ತಿಕೊಳ್ಳಲಾಗಿದೆ. ಮುಂದೆ ಆಡಳಿತಾತ್ಮಕವಾಗಿಯೂ ಸುಧಾರಣೆಗಳನ್ನು ತರಲಾಗುವುದು ಎಂದರು.

ಇದಕ್ಕೂ ಮುನ್ನ ಅವರು ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.