ಮೈಸೂರು: ದಸರಾ ಮಹೋತ್ಸವದಲ್ಲಿ ಭಾಗಿಯಾಗುವ ಗಜಪಡೆಗೆ ಮರಳಿನ ಮೂಟೆಯ ತಾಲೀಮು ಸೋಮವಾರ ಮೈಸೂರು ಅರಮನೆ ಆವರಣದಲ್ಲಿ ಆರಂಭವಾಯಿತು.
ತಾಲೀಮಿಗೂ ಮುನ್ನ ಶಾಸ್ತ್ರೋಕ್ತವಾಗಿ ಪೂಜೆ ನೆರವೇರಿಸಲಾಯಿತು.
ಕುಂಕುಮ ಅರಿಸಿನ ಹಚ್ಚಿ, ಪುಷ್ಪನಮನ ಸಲ್ಲಿಸಲಾಯಿತು. ಹಣ್ಣುಕಾಯಿಗಳನ್ನು ನೈವೇದ್ಯ ಮಾಡಿ ಮಂಗಳಾರತಿ ಬೆಳಗಲಾಯಿತು.
ನಂತರ 500-600 ಕೆ.ಜಿಗೆ ತೂಕದ ಮರಳಿನ ಮೂಟೆಗಳನ್ನು ಹೊರಿಸಿ ತಾಲೀಮು ನಡೆಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.