ADVERTISEMENT

ಮತಾಂತರಕ್ಕೆ ಯತ್ನ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2021, 4:32 IST
Last Updated 22 ಸೆಪ್ಟೆಂಬರ್ 2021, 4:32 IST

ಸಾಗರ: ತಾಲ್ಲೂಕಿನ ತಾಳಗುಪ್ಪ ಗ್ರಾಮದಲ್ಲಿ ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ ಆರೋಪದ ಮೇರೆಗೆ ಇಬ್ಬರನ್ನು ಗ್ರಾಮಾಂತರ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಜೋಗ್‌ಫಾಲ್ಸ್‌ನ ಅನಿಲ್ ಕುಮಾರ್ ಹಾಗೂ ಈತನ ಪತ್ನಿ ಪ್ರಶಾಂತಿ ಬಂಧಿತರು.

ತಾಳಗುಪ್ಪ ಗ್ರಾಮದ ಜ್ಯೋತಿ ಎಂಬುವರ ಪತಿ ಮೂರು ವರ್ಷಗಳ ಹಿಂದೆ ತೀರಿಕೊಂಡಿದ್ದು, ಜ್ಯೋತಿ ಅವರು ಮನೆಯಲ್ಲಿ ಒಬ್ಬರೇ ಇರುವಾಗ ಅಲ್ಲಿಗೆ ಬಂದ ಅನಿಲ್ ಕುಮಾರ್ ಹಾಗೂ ಪ್ರಶಾಂತಿ ಅವರು ಕೆಲವು ಆಮಿಷಗಳನ್ನು ಒಡ್ಡಿ ಜ್ಯೋತಿ ಅವರಿಗೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದರು ಎಂದು ದೂರಲಾಗಿದೆ.

ADVERTISEMENT

ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.