ಬೆಂಗಳೂರು: ಶ್ರೀರಾಮಪುರ ಠಾಣೆ ವ್ಯಾಪ್ತಿಯ ಕನ್ನಿಕಾಪರಮೇಶ್ವರಿದೇವಸ್ಥಾನದಲ್ಲಿ ದೇವಿಮೂರ್ತಿ ಮೇಲಿದ್ದ ಚಿನ್ನದ ಮಾಂಗಲ್ಯ ಕದ್ದಿದ್ದ ಆರೋಪಿ ಕಲ್ಲೇಶ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.
‘ಮಂಡ್ಯದ ಕಲ್ಲೇಶ್, ಭಕ್ತರ ಸೋಗಿನಲ್ಲಿ ಕೃತ್ಯ ಎಸಗಿದ್ದ. ಕಳ್ಳತನ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ಸದ್ಯ ಈತ ನ್ಯಾಯಾಂಗ ಬಂಧನದಲ್ಲಿದ್ದಾನೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಹಲವರ ಬಳಿ ಸಾಲ ಮಾಡಿಕೊಂಡಿದ್ದ ಆರೋಪಿ, ಅದನ್ನು ತೀರಿಸಲಾಗದೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ. ಸಾಲಗಾರರ ಕಾಟ ಹೆಚ್ಚಾಗಿತ್ತು. ಸಾಲ ತೀರಿಸಲು ಹಣ ಹೊಂದಿಸಬೇಕೆಂದು ಆರೋಪಿ ಕಳ್ಳತನಕ್ಕೆ ಇಳಿದಿದ್ದ’ ಎಂದು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.