ADVERTISEMENT

ಕುಂದುಕೊರತೆ ಸಭೆ ನಾಳೆ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2021, 7:05 IST
Last Updated 14 ಸೆಪ್ಟೆಂಬರ್ 2021, 7:05 IST

ಮಧುಗಿರಿ: ತುಮಕೂರು ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಠಾಣೆಯಿಂದ ಸೆ. 15ರಂದು ಮಧ್ಯಾಹ್ನ 12ಗಂಟೆಯಿಂದ 2 ರವರೆಗೆ ಸಾರ್ವಜನಿಕರ ಕುಂದುಕೊರತೆ ಸಭೆ ಹಮ್ಮಿಕೊಳ್ಳಲಾಗಿದೆ. ಜನರು ಈ ಸಭೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾ.ಪಂ. ಇಒ ಡಿ. ದೊಡ್ಡಸಿದ್ದಯ್ಯ ತಿಳಿಸಿದ್ದಾರೆ.

ತಾಲ್ಲೂಕುಮಟ್ಟದ ಅಧಿಕಾರಿಗಳು ಭಾಗವಹಿಸಬೇಕು. ಪುರಸಭೆ , ಗ್ರಾ.ಪಂ. ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT