ADVERTISEMENT

ಕೃಷ್ಣಮಠದಲ್ಲಿ ಎಲ್ಲ ಸೇವೆಗಳು ಆರಂಭ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2021, 15:13 IST
Last Updated 22 ಸೆಪ್ಟೆಂಬರ್ 2021, 15:13 IST
ಕೃಷ್ಣಮಠದ ಸಾಂದರ್ಭಿಕ ಚಿತ್ರ
ಕೃಷ್ಣಮಠದ ಸಾಂದರ್ಭಿಕ ಚಿತ್ರ   

ಉಡುಪಿ: ಜಿಲ್ಲೆಯಲ್ಲಿ ಕೋವಿಡ್‌–19 ಪ್ರಮಾಣ ತಗ್ಗುತ್ತಿರುವ ಹಿನ್ನೆಲೆಯಲ್ಲಿ ಬುಧವಾರದಿಂದ ಕೃಷ್ಣಮಠದಲ್ಲಿ ಹಿಂದಿನಂತೆ ಪೂಜೆ ಹಾಗೂ ಸೇವಾ ಕೈಂಕರ್ಯಗಳು ಆರಂಭವಾಗಿವೆ.

ಬೆಳಿಗ್ಗೆ 6ಕ್ಕೆ ಆರಂಭವಾಗುವ ಅಲಂಕಾರ ಪೂಜೆಯಿಂದ ಸಂಜೆಯ ಚಾಮರ ಸೇವೆಯವರೆಗೆ ಪೂಜಾ ವಿಧಿವಿಧಾನಗಳು ನಡೆಯಲಿವೆ. ಚಾಮರ ಸೇವೆ ನಂತರ ರಾತ್ರಿ 9ರವರೆಗೆ ಭಕ್ತರಿಗೆ ಕೃಷ್ಣನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಕ್ತರಿಗೆ ಮಧ್ಯಾಹ್ನ ಹಾಗೂ ರಾತ್ರಿ ಪ್ರಸಾದ (ಭೋಜನ) ವ್ಯವಸ್ಥೆ ಇದೆ ಎಂದು ಪರ್ಯಾಯ ಅದಮಾರು ಮಠದ ವ್ಯವಸ್ಥಾಪಕ ಗೋವಿಂದರಾಜ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT