ADVERTISEMENT

ಕಾನಾಹೊಸಹಳ್ಳಿ: ಅಪಘಾತದಲ್ಲಿ ಗಾಯಗೊಂಡವರಿಗೆ ನಟ ಅಜಯ್‌ ರಾವ್‌ ಪ್ರಥಮ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2021, 16:05 IST
Last Updated 20 ಸೆಪ್ಟೆಂಬರ್ 2021, 16:05 IST
ಗಾಯಗೊಂಡವರಿಗೆ ನಟ ಅಜಯ್‌ ರಾವ್‌ ಪ್ರಥಮ ಚಿಕಿತ್ಸೆ ನೀಡಿದರು
ಗಾಯಗೊಂಡವರಿಗೆ ನಟ ಅಜಯ್‌ ರಾವ್‌ ಪ್ರಥಮ ಚಿಕಿತ್ಸೆ ನೀಡಿದರು   

ಕಾನಾಹೊಸಹಳ್ಳಿ (ವಿಜಯನಗರ ಜಿಲ್ಲೆ): ಕೂಡ್ಲಿಗಿ ತಾಲ್ಲೂಕಿನ ಕಾನಾಹೊಸಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸೋಮವಾರ ಸಂಜೆ ಅಪಘಾತದಲ್ಲಿ ಗಾಯಗೊಂಡವರಿಗೆ ನಟ ಅಜಯ್‌ ರಾವ್‌ ಪ್ರಥಮ ಚಿಕಿತ್ಸೆ ನೀಡಿ ನೆರವಾಗಿದ್ದಾರೆ.

ಮೈಸೂರಿನಿಂದ ಹೊಸಪೇಟೆ ಕಡೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿ ಆಗಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇದೇ ಮಾರ್ಗದಿಂದ ಬೆಂಗಳೂರಿಗೆ ಹೋಗುತ್ತಿದ್ದ ನಟ ಅಜಯ್‌ ರಾವ್‌ ಗಾಯಗೊಂಡವರನ್ನು ಗಮನಿಸಿ, ಕಾರು ನಿಲ್ಲಿಸಿ, ಅವರ ಕಾರಿನಲ್ಲಿದ್ದ ಪ್ರಥಮ ಚಿಕಿತ್ಸೆಯ ಪೆಟ್ಟಿಗೆಯೊಳಗಿಂದ ಔಷಧ ತೆಗೆದುಕೊಂಡು ಹೋಗಿ ಉಪಚರಿಸಿದ್ದಾರೆ. ಬಳಿಕ ಅಲ್ಲಿಗೆ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಬಂದು, ಹೆಚ್ಚಿನ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT