ADVERTISEMENT

ಹಿರೇಹಡಗಲಿ: ಕಲ್ಲೇಶ್ವರನಿಗೆ ಸೂರ್ಯರಶ್ಮಿಯ ಸಿಂಚನ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2023, 15:54 IST
Last Updated 21 ಮಾರ್ಚ್ 2023, 15:54 IST
   

ಹೂವಿನಹಡಗಲಿ (ವಿಜಯನಗರ): ತಾಲ್ಲೂಕಿನ ಹಿರೇಹಡಗಲಿ ಗ್ರಾಮದ ಐತಿಹಾಸಿಕ ಕಲ್ಲೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಯುಗಾದಿ ಅಮವಾಸ್ಯೆಯಂದು ಬೆಳಿಗ್ಗೆ ಶಿವಲಿಂಗಕ್ಕೆ ಸೂರ್ಯರಶ್ಮಿಗಳ ಸಿಂಚನವಾಯಿತು. ಗ್ರಾಮದ ಭಕ್ತರು ಅಪರೂಪದ ಕ್ಷಣವನ್ನು ವೀಕ್ಷಿಸಿ ಸಂಭ್ರಮಿಸಿದರು.

ಸೂರ್ಯೋದಯ ವೇಳೆ ಸೂರ್ಯರಶ್ಮಿಗಳು ಎರಡು ನಿಮಿಷ ನೇರವಾಗಿ ಶಿವಲಿಂಗಕ್ಕೆ ಸ್ಪರ್ಶಿಸಿದವು. ಅಮವಾಸ್ಯೆ ಪ್ರಯುಕ್ತ ದೇವಸ್ಥಾನದ ಅರ್ಚಕರು ಬೆಳಿಗ್ಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಸೂರ್ಯರಶ್ಮಿಗಳು ಸ್ಪರ್ಶಿಸಿದ ನಂತರವೂ ವಿಶೇಷ ಪೂಜೆಯೊಂದಿಗೆ ಮಹಾಮಂಗಳಾರತಿ ನೆರವೇರಿಸಲಾಯಿತು. ದೇವಸ್ಥಾನಕ್ಕೆ ಬಂದಿದ್ದ ಭಕ್ತರು ಈ ದೃಶ್ಯವನ್ನು ವೀಕ್ಷಿಸಿ ಪುಳಕಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT