ADVERTISEMENT

ನನ್ನ ಭೇಟಿಗೆ ಯಾರು ಬೇಕಿದ್ದರೂ ಬರಬಹುದು: ಕಾಗೇರಿ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2021, 9:41 IST
Last Updated 11 ಆಗಸ್ಟ್ 2021, 9:41 IST
ವಿಶ್ವೇಶ್ವರ ಹೆಗಡೆ ಕಾಗೇರಿ
ವಿಶ್ವೇಶ್ವರ ಹೆಗಡೆ ಕಾಗೇರಿ   

ಶಿರಸಿ: ವಿಧಾನಸೌಧ ಇರಲಿ, ಮನೆ ಅಥವಾ ಕಚೇರಿ ಇರಲಿ ಸಾರ್ವಜನಿಕರ ಭೇಟಿಗೆ ಸದಾ ಲಭ್ಯವಿರುತ್ತೇನೆ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಸಚಿವ ಆನಂದ್ ಸಿಂಗ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರದ ಕುರಿತು ಭೇಟಿಗೆ ಅವಕಾಶ ಕೇಳಿರುವ ಕುರಿತು ಬುಧವಾರ ನಗರದಲ್ಲಿ ಮಾಧ್ಯಮದವರ ಪ್ರಶ್ನೆಗೆ ಈ ಮೇಲಿನಂತೆ ಪ್ರತಿಕ್ರಿಯಿಸಿದರು.

'ನನ್ನ ಭೇಟಿಗೆ ಅವಕಾಶ ಕೇಳಿದವರಿಗೆ ನಿಶ್ಚಿತವಾಗಿಯೂ ನೀಡುತ್ತೇನೆ' ಎಂದರು. ಆದರೆ ಆನಂದ್ ಸಿಂಗ್ ಭೇಟಿಗೆ ಅವಕಾಶ ಕೇಳಿದ್ದಾರೆಂದು ನೇರವಾಗಿ ಸ್ಪಷ್ಟಪಡಿಸಲಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.