ADVERTISEMENT

ನಾಳೆ ಸಿಇಟಿ ಫಲಿತಾಂಶ ಪ್ರಕಟ: ಸಚಿವ ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2021, 6:10 IST
Last Updated 19 ಸೆಪ್ಟೆಂಬರ್ 2021, 6:10 IST
ಸಚಿವ ಅಶ್ವತ್ಥನಾರಾಯಣ
ಸಚಿವ ಅಶ್ವತ್ಥನಾರಾಯಣ   

ಬೆಂಗಳೂರು: ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಆಗಸ್ಟ್ 28, 29 ಹಾಗೂ 30ರಂದು ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ನಾಳೆ (ಸೆ. 20, ಸೋಮವಾರ) ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ’ದಾಖಲೆಯ ಕಡಿಮೆ ಕಾಲಾವಧಿಯಲ್ಲೇ ಫಲಿತಾಂಶ ಪ್ರಕಟವಾಗುತ್ತಿದೆ. ಇದಕ್ಕಾಗಿ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿ ಅವಿರತವಾಗಿ ಶ್ರಮಿಸಿದ್ದಾರೆ’ ಎಂದು ಸಚಿವರು ಹೇಳಿದ್ದಾರೆ.

ಫಲಿತಾಂಶವು ಸೋಮವಾರ ಸಂಜೆ 4 ಗಂಟೆ ನಂತರ ಈ ಕೆಳಕಂಡ ಲಿಂಕ್ ನಲ್ಲಿ ಪ್ರಕಟವಾಗಲಿದೆ ಎಂದು ಅವರು ಮಾಹಿತಿ ನೀಡಿದರು.

ADVERTISEMENT

ವೆಬ್‌ಸೈಟ್‌:https://cetonline.karnataka.gov.in/kea

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.