ADVERTISEMENT

‘ಗರುಡ ಗಮನ ವೃಷಭ ವಾಹನ’ ಚಿತ್ರದ ಬಗ್ಗೆ ಆರ್‌ಜಿವಿ, ರಾಣಾ ದಗ್ಗುಬಾಟಿ ಹೇಳಿದ್ದೇನು?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಜನವರಿ 2022, 10:04 IST
Last Updated 21 ಜನವರಿ 2022, 10:04 IST
ರಾಣಾ ದಗ್ಗುಬಾಟಿ ಮತ್ತು ಗರುಡ ಗಮನ ವೃಷಭ ವಾಹನ ಚಿತ್ರದಲ್ಲಿ ರಾಜ್‌ ಬಿ. ಶೆಟ್ಟಿ
ರಾಣಾ ದಗ್ಗುಬಾಟಿ ಮತ್ತು ಗರುಡ ಗಮನ ವೃಷಭ ವಾಹನ ಚಿತ್ರದಲ್ಲಿ ರಾಜ್‌ ಬಿ. ಶೆಟ್ಟಿ   

ಬೆಂಗಳೂರು: ನಟ ರಾಜ್‌ ಬಿ. ಶೆಟ್ಟಿ ಅಭಿನಯದ ‘ಗರುಡ ಗಮನ ವೃಷಭ ವಾಹನ’ ಸಿನಿಮಾದ ಬಗ್ಗೆ ತೆಲುಗು ನಿರ್ದೇಶಕ ರಾಮ್‌ ಗೋಪಾಲ್‌ ವರ್ಮಾ, ನಟ ರಾಣಾ ದಗ್ಗುಬಾಟಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿಗೆ ಅಭಿಮಾನಿಯೊಬ್ಬರು ರಾಣಾ ದಗ್ಗುಬಾಟಿ ಅವರನ್ನು ಸ್ವಲ್ಪ ಸಮಯ ಬಿಡುವು ಮಾಡಿಕೊಂಡು ‘ಗರುಡ ಗಮನ ವೃಷಭ ವಾಹನ’ ವೀಕ್ಷಿಸಲು ಒತ್ತಾಯಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಅವರು, ‘ಸಿನಿಮಾ ಅದ್ಭುತವಾಗಿದೆ. ನನಗೆ ಇಷ್ಟವಾಯಿತು!! ಎಂದು ಹೃದಯದ ಎಮೋಜಿಯೊಂದಿಗೆ ಪೋಸ್ಟ್‌ ಮಾಡಿದ್ದಾರೆ.

ಇತ್ತೀಚಿಗೆ ಟ್ವಿಟರ್​​ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದ ರಾಮ್ ಗೋಪಾಲ್ ವರ್ಮಾ, ‘ಚಿತ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ ಬಗ್ಗೆ ಹೊಗಳಲು ಹೊಸ ಪದಗಳನ್ನು ಬಳಸಿದ್ದಾರೆ. ಚಿತ್ರ ಮತ್ತೊಂದು ಲೆವೆಲ್​ನಲ್ಲಿದೆ (Stratospheric) ರಾಜ್ ಪಾತ್ರಕ್ಕೆ ತಕ್ಕಂತೆ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಾರೆ. ಈ ಮೂಲಕ ಅವರು ಸಂಪೂರ್ಣ ರೂಪಾಂತರ (Metamorphic) ಹೊಂದಿದ್ದಾರೆ. ಇಡೀ ಚಿತ್ರ ‘ಅಲ್ಟ್ರಾಸ್ಕೋಪಿಕ್’ (ULTRASCOPIC) ಎಂದು ಬಣ್ಣಿಸಿದ್ದಾರೆ.

ADVERTISEMENT

ಕಳೆದ ನವೆಂಬರ್ 19ರಂದು ‘ಗರುಡ ಗಮನ ವೃಷಭ ವಾಹನ’ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಒಟಿಟಿಯಲ್ಲೂ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.