ADVERTISEMENT

Bigg Boss 8; ಇಲ್ಲಿದೆ ಫಿನಾಲೆಯಲ್ಲಿರುವ ಐವರು ಸ್ಪರ್ಧಿಗಳ ಪರಿಚಯ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2021, 12:23 IST
Last Updated 7 ಆಗಸ್ಟ್ 2021, 12:23 IST
ಕಲರ್ಸ್‌ ಕನ್ನಡ ವಿಡಿಯೊ ಸ್ಕ್ರೀನ್ ಗ್ರ್ಯಾಬ್
ಕಲರ್ಸ್‌ ಕನ್ನಡ ವಿಡಿಯೊ ಸ್ಕ್ರೀನ್ ಗ್ರ್ಯಾಬ್   

ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಫಿನಾಲೆಗೆ ಚಾಲನೆ ಸಿಕ್ಕಿದೆ. ಇಂದು ಮತ್ತು ನಾಳೆ ಎರಡು ದಿನ ಕಾರ್ಯಕ್ರಮ ನಡೆಯುತ್ತಿದ್ದು, ಭಾನುವಾರ ರಾತ್ರಿ ವೇಳೆಗೆ ವಿನ್ನರ್ ಯಾರೆಂಬುದು ಗೊತ್ತಾಗಲಿದೆ. ಸದ್ಯ, ಫಿನಾಲೆಗೆ ಐವರು ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದು, ಅವರ ಕಿರು ಪರಿಚಯ ಇಲ್ಲಿದೆ.

ಅರವಿಂದ್ ಕೆ.ಪಿ
ಅರವಿಂದ್ ಕೆ.ಪಿ.ಅಂತರಾಷ್ಟ್ರೀಯಮಟ್ಟದ ರೇಸ್‌ ಬೈಕ್ ರೈಡರ್‌. ವಿವಿಧ ಮಟ್ಟದ ಬೈಕ್ ರೇಸ್‌ಗಳಲ್ಲಿ 17 ರಾಷ್ಟ್ರೀಯ ಮತ್ತು ಒಂದು ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ ಗೆದ್ದು ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಮಲಯಾಳಂ ಚಿತ್ರ ‘ಬೆಂಗಳೂರು ಡೇಸ್‌’ನಲ್ಲೂ ನಟಿಸಿದ್ದಾರೆ. ಸದ್ಯ ಬಿಗ್‌ ಬಾಸ್‌ ಸ್ಪರ್ಧಿ.

ಮಂಜು ಪಾವಗಡ

ADVERTISEMENT

ಮಂಜು ಪಾವಗಡ ಕನ್ನಡ ಕಿರುತೆರೆಯ ಹಾಸ್ಯ ಕಲಾವಿದ. ಕಲರ್ಸ್ ಕನ್ನಡ ವಾಹಿನಿಯ ಮಜಾ ಭಾರತ ಹಾಸ್ಯಪ್ರಧಾನ ಕಾರ್ಯಕ್ರಮದ ಮೂಲಕ ಖ್ಯಾತರಾದವರು. ರಂಗಭೂಮಿ, ಕಲೆ ಇವರ ಆಸಕ್ತಿಯ ಕ್ಷೇತ್ರಗಳು. ಬಿಗ್‌ ಬಾಸ್‌ ಮನೆಯಲ್ಲಿ ತಮ್ಮ ಎಂದಿನ ಹಾಸ್ಯ, ಭಾವುಕತೆಯ ಕಾರಣದಿಂದ ಗಮನ ಸೆಳೆದವರು. ಶಿವರಾಜ್‌ಕುಮಾರ್‌ ಅವರಿಂದ ಶುಭಹಾರೈಕೆ ಬೇಕು ಎಂದು ಬಿಗ್‌ ಬಾಸ್‌ ‘ಕಿವಿ’ಯಲ್ಲಿ ಕೇಳಿ ಅದನ್ನು ಈಡೇರಿಸಿಕೊಂಡು ಸುದ್ದಿಯಾದವರು.

ವೈಷ್ಣವಿ ಗೌಡ

ವೈಷ್ಣವಿ ಗೌಡ ಅವರು ಕಿರುತೆರೆ ನಟಿ. ‘ಅಗ್ನಿಸಾಕ್ಷಿ’ ಧಾರಾವಾಹಿಯ ಸನ್ನಿಧಿ ಪಾತ್ರದ ಮೂಲಕ ಖ್ಯಾತರಾದವರು. ರೂಪದರ್ಶಿ, ಹಲವು ಉತ್ಪನ್ನಗಳ ರಾಯಭಾರಿ. ಝೀ ಕನ್ನಡ ವಾಹಿನಿಯ ‘ದೇವಿ’ ಧಾರಾವಾಹಿಯ ಮೂಲಕ ಕಿರುತೆರೆ ಪ್ರವೇಶಿಸಿದವರು. ‘ಪುನರ್‌ವಿವಾಹ’ ಇವರು ನಟಿಸಿದ ಮತ್ತೊಂದು ಪ್ರಮುಖ ಧಾರಾವಾಹಿ.

ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿ. ನಟನೆಯ ಕಾರಣಕ್ಕೆ ಪದವಿ ಶಿಕ್ಷಣ ಅರ್ಧಕ್ಕೆ ಬಿಟ್ಟರು. ನಂತರ ಬೆಂಗಳೂರು ವಿಶ್ವವಿದ್ಯಾನಿಲಯದ ದೂರಶಿಕ್ಷಣ ಮೂಲಕ ಪದವಿ ಪಡೆದರು. ಭರತನಾಟ್ಯ, ಕೂಚಿಪುಡಿ ಮತ್ತು ಬೆಲ್ಲಿ ಡ್ಯಾನ್ಸಿಂಗ್‌ನಲ್ಲಿ ಪರಿಣತರು. `ಗಿರಿಗಿಟ್ಲೆ’ ಚಿತ್ರದ ಮೂಲಕ ನಾಯಕಿಯಾಗಿ ಚಂದನವನ ಪ್ರವೇಶಿಸಿದ್ದಾರೆ. `ಭರ್ಜರಿ ಕಾಮಿಡಿ' ಎಂಬ ರಿಯಾಲಿಟಿ ಶೋದ ನಿರೂಪಕಿ. ‘ಕುಣಿಯೋಣ ಬಾರಾ’ ಡ್ಯಾನ್ಸ್ ರಿಯಾಲಿಟಿ ಶೋದಲ್ಲಿ ಕೂಡ ಭಾಗವಹಿಸಿದ್ದರು.

ಪ್ರಶಾಂತ್‌ ಸಂಬರಗಿ

ಪ್ರಶಾಂತ್‌ ಸಂಬರಗಿ ಮೂಲತಃ ಉದ್ಯಮಿ. ಎಂಬಿಎ ಪದವೀಧರ. ಸಾಮಾಜಿಕ ಕಾರ್ಯಕರ್ತ, ಚಿತ್ರ ನಿರ್ಮಾಪಕ, ವಿತರಕ.

ರಿಲಯನ್ಸ್‌ ಇನ್ಫೋಕಾಂ, ರಿಲಯನ್ಸ್‌ ವರ್ಲ್ಡ್‌ನಲ್ಲಿ ದುಡಿದ ಅನುಭವ, ರಿಯಲ್‌ ಎಸ್ಟೇಟ್‌ ಕ್ಷೇತ್ರದಲ್ಲಿ ತಮ್ಮದೇ ಸಂಸ್ಥೆಯನ್ನು ಹೊಂದಿದ್ದಾರೆ. ಪ್ರಮುಖ ಚಿತ್ರನಟರಿಗೆ ಮಾಧ್ಯಮ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಬ್ರಾಂಡ್‌ ಬೆಳವಣಿಗೆ, ತಾಂತ್ರಿಕ ಸಲಹೆಗಾರರಾಗಿಯೂ ಕೆಲಸ ಮಾಡುತ್ತಿದ್ದಾರೆ. ನಟ ಅರ್ಜುನ್‌ ಸರ್ಜಾ ಅವರಿಗೆ ಆಪ್ತರೂ ಆಗಿದ್ದಾರೆ.

ದಿವ್ಯಾ ಉರುಡುಗ

ದಿವ್ಯಾ ಉರುಡುಗ ಕಿರುತೆರೆ, ಬೆಳ್ಳಿತೆರೆಯಲ್ಲಿ ಹೆಸರು ಮಾಡಿದವರು. ‘ಹುಲಿರಾಯ’ ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದರು. `ಧ್ವಜ' ಮತ್ತು `ಫೇಸ್ 2 ಪೇಸ್' ಎಂಬ ಚಿತ್ರಗಳಲ್ಲಿ ನಾಯಕಿ ಪಾತ್ರ ಮಾಡಿದ್ದಾರೆ. ದಿವ್ಯಾ ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಕಿರುತೆರೆಯಲ್ಲಿ `ಚಿಟ್ಟೆ ಹೆಜ್ಜೆ', `ಅಂಬಾರಿ',`ಖುಷಿ’, `ಓಂ ಶಕ್ತಿ ಓಂ ಶಾಂತಿ’ ಸೀರಿಯಲ್‌ಗಳಲ್ಲಿ ನಟಿಸಿದವರು. ಉದಯ ಟಿವಿಯಲ್ಲಿ ಪ್ರಸಾರವಾದ `ಸೂಪರ್ ಕಬ್ಬಡ್ಡಿ’ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ ಅನುಭವ ಅವರದ್ದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.