ಬೆಂಗಳೂರು: ಕನ್ನಡದ ಪ್ರಮುಖ ಚಾನಲ್ಗಳಲ್ಲಿ ಒಂದಾಗಿರುವ ಉದಯ ಟಿವಿ, ಎರಡು ನೂತನ ಧಾರಾವಾಹಿಗಳನ್ನು ವೀಕ್ಷಕರಿಗೆ ಪರಿಚಯಿಸುತ್ತಿದೆ.
ಆಗಸ್ಟ್ 23ರ ಸೋಮವಾರದಿಂದ ಮಧ್ಯಾಹ್ನ 2 ಗಂಟೆಗೆ ‘ಕಾದಂಬರಿ’ ಮತ್ತು 2:30ಕ್ಕೆ ‘ನಿನ್ನಿಂದಲೇ’ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.
ಕಾದಂಬರಿ: ಸೋಮವಾರದಿಂದ ಶನಿವಾರ ಮಧ್ಯಾಹ್ನ 2 ಗಂಟೆಗೆ ಶ್ರೀ ದುರ್ಗಾ ಕ್ರೀಯೇಷನ್ಸ್ ವಿಭಿನ್ನ ಕಥಾಹಂದರವುಳ್ಳ ‘ಕಾದಂಬರಿ’ ಎಂಬ ಧಾರಾವಾಹಿಯನ್ನು ಪ್ರೇಕ್ಷಕರೆದುರಿಡಲು ಸಿದ್ಧವಾಗಿದೆ.
ನಿನ್ನಿಂದಲೇ : ಸೋಮವಾರದಿಂದ ಶನಿವಾರದವರೆಗೆ ಮಧ್ಯಾಹ್ನ 2:30ಕ್ಕೆ ಧ್ವನಿ ಕ್ರಿಯೇಷನ್ಸ್ ಲಾಂಚನದಲ್ಲಿ ನಟ, ರಾಜೇಶ ನಟರಂಗ ನಿರ್ಮಾಣದಲ್ಲಿ ತಯಾರಾಗುತ್ತಿರುವ ನಿನ್ನಿಂದಲೇ ಧಾರಾವಾಹಿ ಪ್ರಸಾರವಾಗಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.