ADVERTISEMENT

ಸಿದ್ದಾಪುರದ ಹಲಗೇರಿಯಲ್ಲಿ 10 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2021, 11:21 IST
Last Updated 11 ಜುಲೈ 2021, 11:21 IST
ಕಾಳಿಂಗಸರ್ಪವನ್ನು ಹಿಡಿದುಕೊಂಡಿರುವ ಉರಗಪ್ರೇಮಿ ಪ್ರಶಾಂತ ಹುಲೇಕಲ್
ಕಾಳಿಂಗಸರ್ಪವನ್ನು ಹಿಡಿದುಕೊಂಡಿರುವ ಉರಗಪ್ರೇಮಿ ಪ್ರಶಾಂತ ಹುಲೇಕಲ್   

ಶಿರಸಿ: ಸಿದ್ದಾಪುರ ತಾಲ್ಲೂಕಿನ ಹಲಗೇರಿಯ ಮನೆಯೊಂದರಲ್ಲಿ ಕಾಣಿಸಿಕೊಂಡಿದ್ದ ಹತ್ತು ಅಡಿಯಷ್ಟು ಉದ್ದದ ಕಾಳಿಂಗ ಸರ್ಪವನ್ನು ನಗರದ ಉರಗಪ್ರೇಮಿ ಪ್ರಶಾಂತ ಹುಲೇಕಲ್ ಶನಿವಾರ ಸಂಜೆ ಸೆರೆಹಿಡಿದು ಕಾಡಿಗೆ ಬಿಟ್ಟರು.

ಯಶವಂತ ನಾಯ್ಕ ಎಂಬುವವರ ಮನೆಯ ಚಾವಣಿಯಲ್ಲಿ ಹಾವು ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು. ಅರಣ್ಯ ಇಲಾಖೆಯವರು ಪ್ರಶಾಂತ ಅವರಿಗೆ ಮಾಹಿತಿ ನೀಡಿದ್ದರು. ಹಾವನ್ನು ಸುರಕ್ಷಿತವಾಗಿ ಹಿಡಿದ ಅವರು ಬಳಿಕ ಅದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸಹಕಾರದೊಂದಿಗೆ ಅರಣ್ಯಕ್ಕೆ ಬಿಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT