‘ಬಾಲಿವುಡ್ ನಟ ಅಜಯ್ ದೇವ್ಗನ್ ಅವರನ್ನು ದೆಹಲಿಯಲ್ಲಿ ರೈತರು ಥಳಿಸಿದ್ದಾರೆ. ಕೇಂದ್ರದ ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದರಿಂದ ಹೀಗೆ ಮಾಡಲಾಗಿದೆ’ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದೆ. ಅವರನ್ನು ಥಳಿಸಲಾಗಿದೆ ಎನ್ನಲಾದ ವಿಡಿಯೊ ಕೂಡ ವೈರಲ್ ಆಗಿದೆ.
ಲಾಜಿಕಲ್ ಇಂಡಿಯನ್ ಫ್ಯಾಕ್ಟ್ ಚೆಕ್ ವೇದಿಕೆಯು ವಿಡಿಯೊದ ಅಸಲಿಯತ್ತನ್ನು ಪರಾಮರ್ಶೆಗೆ ಒಳಪಡಿಸಿದೆ. ವೈರಲ್ ಆಗಿರುವ ವಿಡಿಯೊದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದ ದೃಶ್ಯ ದಾಖಲಾಗಿದೆ. ದೆಹಲಿಯ ಏರೋಸಿಟಿಯಲ್ಲಿ ನಡೆದ ಈ ಘಟನೆಯ ದೃಶ್ಯಾವಳಿಗಳಲ್ಲಿ ಮಾರ್ಚ್ 28ರಂದು ‘ಎನ್ಡಿಟಿವಿ’ ಪ್ರಕಟಿಸಿತ್ತು. ಅಜಯ್ ದೇವ್ಗನ್ ಅವರ ಮ್ಯಾನೇಜರ್ ಅವರನ್ನು ಸಂಪರ್ಕಿಸಿದಾಗ, ಹಲ್ಲೆ ನಡೆದ ವಿಷಯವನ್ನು ಅವರು ಅಲ್ಲಗಳೆದಿದ್ದಾರೆ. ಸ್ವತಃ ಅಜಯ್ ದೇವ್ಗನ್ ಅವರೇ ಟ್ವಿಟರ್ನಲ್ಲಿ ಇದನ್ನು ನಿರಾಕರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.