ನವದೆಹಲಿ: ಗುಜರಾತ್ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಜನರು ಮತ್ತು ಬಿಜೆಪಿ ನಡುವಿನ ಬಾಂಧವ್ಯ ಎಷ್ಟು ಆಳವಾಗಿ ಬೇರೂರಿದೆ ಎಂಬುದನ್ನು ಬಿಂಬಿಸಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
‘ಗುಜರಾತ್ ರಾಜ್ಯದಾದ್ಯಂತ ಮತ್ತು ಗಾಂಧಿನಗರ ಮಹಾನಗರಪಾಲಿಕೆ ಚುನಾವಣೆಯಲ್ಲಿ ಮತ್ತೆ, ಮತ್ತೆ ನಮಗೆ ಆಶೀರ್ವದಿಸಿರುತ್ತಿರುವುದಕ್ಕೆ ನಾವು ಮತದಾರರಿಗೆ ಆಭಾರಿಯಾಗಿದ್ದೇವೆ’ ಎಂದು ಪ್ರಧಾನಿ ಅವರು ಟ್ವೀಟ್ ಮಾಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ಜನಪರ ನೀತಿ ಮೇಲೆ ಜನರು ವಿಶ್ವಾಸ ಇಟ್ಟಿರುವುದನ್ನು ಇದು ತೋರಿಸಲಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.