ADVERTISEMENT

ಮಹಂತ ನರೇಂದ್ರ ಗಿರಿ ಸಾವಿನ ಕುರಿತು ಸಿಬಿಐ ತನಿಖೆಗೆ ಶಿವಸೇನಾ ಒತ್ತಾಯ

ಪಿಟಿಐ
Published 21 ಸೆಪ್ಟೆಂಬರ್ 2021, 9:05 IST
Last Updated 21 ಸೆಪ್ಟೆಂಬರ್ 2021, 9:05 IST
ಸಂಜಯ್ ರಾವುತ್‌
ಸಂಜಯ್ ರಾವುತ್‌   

ನವದೆಹಲಿ: ಅಖಿಲ ಭಾರತ ಅಖಾಡ ಪರಿಷತ್‌ನ ಅಧ್ಯಕ್ಷ ಮಹಂತ ನರೇಂದ್ರ ಗಿರಿ ಅವರ ನಿಗೂಢ ಸಾವಿನ ಕುರಿತು ಸಿಬಿಐ ತನಿಖೆ ನಡೆಸುವಂತೆ ಶಿವಸೇನಾ ನಾಯಕ ಸಂಜಯ್ ರಾವುತ್‌ ಆಗ್ರಹಿಸಿದ್ದಾರೆ.

ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಹಾಂತ ಗಿರಿ ಸಾವಿನ ಕುರಿತು ಮಾತನಾಡಿದ ರಾವುತ್ ‘ಉತ್ತರ ಪ್ರದೇಶದಲ್ಲಿ ಹಿಂದುತ್ವದ ಕತ್ತು ಹಿಸುಕಲಾಗುತ್ತಿದೆ‘ ಎಂದು ಅಲ್ಲಿನ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

‘ಮಹಂತ ಸ್ವಾಮೀಜಿ ಅವರ ಸಾವು ಆತ್ಮಹತ್ಯೆ ಎಂದು ಹೇಳುತ್ತಿದ್ದರೂ, ಇದೊಂದು ಕೊಲೆ ಎಂದು ಅವರ ಶಿಷ್ಯರು ಶಂಕಿಸಿದ್ದಾರೆ. ಹಾಗಾಗಿ ಮಹಾರಾಷ್ಟ್ರದ ಪಾಲ್ಘಾರ್‌ನಲ್ಲಿ ನಡೆದ ಸಾಧುಗಳ ಹತ್ಯೆ ಕುರಿತು ಎಂವಿಎ ಸರ್ಕಾರ ನಡೆಸಿದ ತನಿಖೆ ರೀತಿ, ಮಹಾಂತ ಅವರ ಸಾವಿನ ಕುರಿತು ಸಿಬಿಐ ತನಿಖೆಗೆ ನಡೆಸಬೇಕು‘ ಎಂದು ಸಂಜಯ್‌ ಒತ್ತಾಯಿಸಿದರು.

ADVERTISEMENT

ಏಪ್ರಿಲ್ 16, 2020 ರಂದು, ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಗಡ್ಚಿಂಚಲೆಯಲ್ಲಿ ಗುಂಪೊಂದು ಚಿಕ್ನೆ ಮಹಾರಾಜ್ ಕಲ್ಪವೃಕ್ಷಗಿರಿ (70) ಮತ್ತು ಸುಶೀಲ್‌ ಗಿರಿ ಮಹಾರಾಜ್ (35) ಮತ್ತು ಅವರ ಚಾಲಕ ನಿಲೇಶ್ ತೆಲ್ಗಡೆ (30) ಅವರನ್ನು ಹತ್ಯೆ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.