ADVERTISEMENT

ಬಿಎಸ್‌ವೈ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿಯಿಂದ 2ನೇ ಹೆಜ್ಜೆ: ಕಾಂಗ್ರೆಸ್‌ 

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಅಕ್ಟೋಬರ್ 2021, 10:24 IST
Last Updated 9 ಅಕ್ಟೋಬರ್ 2021, 10:24 IST
ಬಿ.ಎಸ್‌ ಯಡಿಯೂರಪ್ಪ
ಬಿ.ಎಸ್‌ ಯಡಿಯೂರಪ್ಪ    

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಸರ್ವನಾಶ ಮಾಡಲು ಬಿಜೆಪಿ ಹೆಜ್ಜೆ ಇಟ್ಟಿದೆ ಎಂದು ಕರ್ನಾಟಕ ಕಾಂಗ್ರೆಸ್‌ ಹೇಳಿದೆ.

ಈ ಬಗ್ಗೆ ಶನಿವಾರ ಕಾಂಗ್ರೆಸ್‌ನ ಅಧಿಕೃತ ಟ್ವಿಟರ್‌ ಖಾತೆಯ ಮೂಲಕ ಟ್ವೀಟ್‌ ಮಾಡಲಾಗಿದೆ.

‘ಯಡಿಯೂರಪ್ಪ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎನ್ನುತ್ತಿದ್ದ ಬಿಜೆಪಿಗರು ಈಗ ಬೊಮ್ಮಾಯಿ ಅವರ ನೇತೃತ್ವದಲ್ಲಿ ಎನ್ನುತ್ತಿದ್ದಾರೆ. ಕಣ್ಣೀರು ಹಾಕಿಸಿ ಯಡಿಯೂರಪ್ಪ ಅವರ ಅಧಿಕಾರ ಕಿತ್ತುಕೊಂಡ ಬಿಜೆಪಿ, ಈಗ ಅವರ ಆಪ್ತರನ್ನೇ ಟಾರ್ಗೆಟ್ ಮಾಡಿ ಐಟಿ ರೈಡ್ ಮಾಡಿಸಿದೆ,‘ ಎಂದು ಆರೋಪಿಸಿದೆ.

ADVERTISEMENT

ಐಟಿ ದಾಳಿಯು ಬಿಎಸ್‌ವೈ ಅವರನ್ನು ರಾಜಕೀಯವಾಗಿ ಸರ್ವನಾಶ ಮಾಡಲು ಬಿಜೆಪಿ ಇಟ್ಟ ಎರಡನೇ ಹೆಜ್ಜೆ ಎಂದು ಕಾಂಗ್ರೆಸ್‌ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.