ADVERTISEMENT

ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಕಾರುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2021, 8:39 IST
Last Updated 12 ಆಗಸ್ಟ್ 2021, 8:39 IST
ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ
ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ   

ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರಮನೆ ಮುಂದೆ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ದುಷ್ಕರ್ಮಿಗಳುಬೆಂಕಿ ಹಚ್ಚಿದ್ದು, ಎರಡೂ‌ ಕಾರುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.

ಬುಧವಾರ ರಾತ್ರಿ 1.30ರ ವೇಳೆಗೆ ನಾಲ್ವರು ಕಿಡಿಗೇಡಿಗಳು ಈ ದುಷ್ಕೃತ್ಯಎಸಗಿ ಪರಾರಿಯಾಗಿದ್ದಾರೆ.

ಘಟನೆ ಬಗ್ಗೆ ಸತೀಶ್ ರೆಡ್ಡಿ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಕಮಿಷನರ್ ಮುರುಗನ್ ಹಾಗೂ ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಜೋಷಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ADVERTISEMENT

'ಭದ್ರತಾ ಸಿಬ್ಬಂದಿ ಮನೆ ಎದುರಿನ ಪ್ರವೇಶ ದ್ವಾರದ ಬಳಿ ಇದ್ದರು. ಆದರೆ, ಹಿಂದಿನ ದ್ವಾರದಿಂದ ಬಂದಿರುವಕಿಡಿಗೇಡಿಗಳು ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಸಿ.ಸಿ.ಟಿ.ವಿ. ಕ್ಯಾಮೆರಾ ಇದ್ದು, ಆರೋಪಿಗಳ ಮುಖ ಸ್ಪಷ್ಟವಾಗಿ ಸೆರೆಯಾಗಿಲ್ಲ' ಎಂದು ಡಿಸಿಪಿ ಶ್ರೀನಾಥ್ ಜೋಷಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.