ADVERTISEMENT

ಬಿಜೆಪಿ ಉದ್ಯಮಿಗಳ ದಲ್ಲಾಳಿಯೇ ಹೊರತು, ಜನಸಾಮಾನ್ಯರ ಪರವಲ್ಲ: ಕಾಂಗ್ರೆಸ್‌ ಟೀಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಸೆಪ್ಟೆಂಬರ್ 2021, 8:17 IST
Last Updated 20 ಸೆಪ್ಟೆಂಬರ್ 2021, 8:17 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಬಿಜೆಪಿ ಉದ್ಯಮಿಗಳ ದಲ್ಲಾಳಿಯೇ ಹೊರತು, ಜನಸಾಮಾನ್ಯರ ಪರವಲ್ಲ ಎಂದು ಕರ್ನಾಟಕ ಕಾಂಗ್ರೆಸ್‌ ಸೋಮವಾರ ವಾಗ್ದಾಳಿ ನಡೆಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, 'ಈಗಾಗಲೇ ಬೆಲೆ ಏರಿಕೆಯಿಂದ ಜನರ ಬದುಕು ಹೈರಾಣಾಗಿದೆ, ಇದರ ನಡುವೆಯೇ ಕೇಂದ್ರ ಸರ್ಕಾರ ಮತ್ತಷ್ಟು ವಸ್ತುಗಳ ಮೇಲಿನ ಜಿಎಸ್‌ಟಿ ಹೆಚ್ಚಿಸಿ ಜನರ ಬದುಕನ್ನು ಮತ್ತಷ್ಟು ದುಬಾರಿಯಾಗಿಸಿದೆ. ಕಾರ್ಪೊರೇಟ್ ತೆರಿಗೆ ಕಡಿತಗೊಳಿಸಿ ಸರ್ಕಾರ ಸಾಮಾನ್ಯರ ಮೇಲೆ ತೆರಿಗೆ ಬರೆ ಹಾಕುತ್ತಿದೆ. ಬಿಜೆಪಿ ಉದ್ಯಮಿಗಳ ದಲ್ಲಾಳಿಯೇ ಹೊರತು, ಜನಸಾಮಾನ್ಯರ ಪರವಲ್ಲ' ಎಂದು ಟೀಕಿಸಿದೆ.

ಪೆಟ್ರೋಲ್‌‌, ಡೀಸೆಲ್‌‌, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಇಂದು (ಸೋಮವಾರ) ಕಾಂಗ್ರೆಸ್‌ ಪಕ್ಷವು ಸೈಕಲ್ ಜಾಥಾ ನಡೆಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.