ಬೆಂಗಳೂರು: ಬಿಜೆಪಿ ಸರ್ಕಾರದ ‘ಸ್ಮಾರ್ಟ್ ಸಿಟಿ’ ಎಂಬ ಯೋಜನೆ ಕೇವಲ ಕಣ್ಕಟ್ಟಿಗೆ ಸೀಮಿತವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಬೆಂಗಳೂರಿನ ರಸ್ತೆಗಳ ಬಗ್ಗೆ ‘ಪ್ರಜಾವಾಣಿ’ ಪ್ರಕಟಿಸಿದ್ದ ವಿಶೇಷ ವರದಿಯನ್ನು ಉಲ್ಲೇಖಿಸಿಕಾಂಗ್ರೆಸ್ ಟ್ವೀಟ್ ಮಾಡಿದ್ದು, ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
‘ಬಿಜೆಪಿಯ ‘ಸ್ಮಾರ್ಟ್ ಸಿಟಿ’ ಎಂಬ ಕಣ್ಕಟ್ಟು ಯೋಜನೆಯ ಬಣ್ಣ ಮಳೆಯಲ್ಲಿ ತೊಳೆದುಕೊಂಡು ಹೋಗಿದೆ. ಸ್ಮಾರ್ಟ್ ಸಿಟಿ ಹಗರಣದ ಬಗ್ಗೆ ಬಿಜೆಪಿ ನಾಯಕರ ಮೌನವು, ಗುತ್ತಿಗೆದಾರರ ಜತೆ ಆ ಪಕ್ಷದ ನಾಯಕರೂ ಕಮಿಷನ್ ನುಂಗಿರುವ ಸಂಶಯ ಸೃಷ್ಟಿಸಿದೆ. ಈವರೆಗೂ ‘ಸ್ಮಾರ್ಟ್ ರಸ್ತೆ’ಯ ಗುಂಡಿಗಳಿಗೆ ಬಿದ್ದ ₹191 ಕೋಟಿಗೆ ಹೊಣೆ ಯಾರು’ ಎಂದು ಟ್ವೀಟ್ ಮೂಲಕ ಕಾಂಗ್ರೆಸ್ ಪ್ರಶ್ನಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.