ಬೆಂಗಳೂರು: ‘ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರದಿನೇ ದಿನೇ ವ್ಯಾಪಕವಾಗುತ್ತಿದ್ದು, ದುಡ್ಡು ಕೊಡದೇ ಯಾವ ಫೈಲೂ ಮುಂದಕ್ಕೆ ಚಲಿಸುವುದಿಲ್ಲ ಎಂಬ ದುಃಸ್ಥಿತಿ ನಿರ್ಮಾಣವಾಗಿದೆ’ ಎಂದು ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಸಹಾಯಕ ಎಂಜಿನಿಯರ್ ಬಿ.ಟಿ.ರಾಜು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಆರೋಪಿ ರಾಜು ವಿರುದ್ಧ ಬಲವಾದ ಸಾಕ್ಷ್ಯಗಳಿರುವ ಕಾರಣ ಜಾಮೀನು ನೀಡಲು ಆಗದು’ ಎಂದು ವಜಾಗೊಳಿಸಿದೆ.
ಬಿ.ಟಿ.ರಾಜು, ಅನುಕೂಲಕರ ಆದೇಶ ನೀಡಲು ಮಂಜುನಾಥ್ ಅವರಿಗೆ ₹ 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಫಿರ್ಯಾದುದಾರ ಮಂಜುನಾಥ್ ಚೌಕಾಶಿ ನಡೆಸಿದ ನಂತರ ₹ 60 ಲಕ್ಷಕ್ಕೆ ಕೆಲಸ ಮಾಡಲು ಒಪ್ಪಿಕೊಂಡಿದ್ದರು. 2022ರ ಜೂನ್ 7ರಂದು ಲಂಚದ ಮೊತ್ತದಲ್ಲಿ₹ 5 ಲಕ್ಷ ಮುಂಗಡ ಪಡೆದಾಗ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.