ADVERTISEMENT

Covid-19 Karnataka Update: ರಾಜ್ಯದಲ್ಲಿ 629 ಹೊಸ ಪ್ರಕರಣ, 782 ಜನರು ಗುಣಮುಖ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಸೆಪ್ಟೆಂಬರ್ 2021, 14:06 IST
Last Updated 28 ಸೆಪ್ಟೆಂಬರ್ 2021, 14:06 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 629 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದ್ದು,17 ಜನರು ಮೃತಪಟ್ಟಿದ್ದಾರೆ.ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 29,74,528ಕ್ಕೆ ಏರಿಕೆಯಾಗಿದೆ. 37,763 ಜನರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈವರೆಗೆ 29,24,102 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 12,634 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇಂದು ಗುಣಮುಖರಾಗಿ 782 ಜನರು ಬಿಡುಗಡೆಯಾಗಿದ್ದಾರೆ.

ಸೋಂಕು ದೃಢ ಪ್ರಮಾಣವು ಶೇ 0.67 ರಷ್ಟಿದ್ದರೆ, ಮರಣ ಪ್ರಮಾಣವು ಶೇ 2.70ರಷ್ಟಿದೆ.

ADVERTISEMENT

ಬೆಂಗಳೂರಿನಲ್ಲಿ ಇಂದು ಹೊಸದಾಗಿ 229 ಜನರಿಗೆ ಸೋಂಕು ತಗುಲಿದ್ದು, ಒಟ್ಟಾರೆ 12,22,338 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 12.45 ಲಕ್ಷದ ಗಡಿ ದಾಟಿದೆ. ಇಂದು ಆರು ಜನರು ಮೃತಪಟ್ಟಿದ್ದು, ಈವರೆಗೂ 16,143 ಮಂದಿ ಸಾವಿಗೀಡಾಗಿದ್ದಾರೆ.

ಬಾಗಲಕೋಟೆ, ಚಿಕ್ಕಬಳ್ಳಾಪುರ ಮತ್ತು ದಾವಣಗೆರೆಯಲ್ಲಿ ತಲಾ ಒಂದು ಪ್ರಕರಣ ವರದಿಯಾಗಿವೆ. ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣಗಳು ದಾಖಲಾಗಿವೆ.

ಇನ್ನುಳಿದಂತೆ ಬಳ್ಳಾರಿ 2, ಬೆಳಗಾವಿ 12, ಬೆಂಗಳೂರು ಗ್ರಾಮಾಂತರ 16, ಚಾಮರಾಜನಗರ 5, ಚಿಕ್ಕಮಗಳೂರು 17, ಚಿತ್ರದುರ್ಗ 5, ದಕ್ಷಿಣ ಕನ್ನಡ 96, ದಾವಣಗೆರೆ 1, ಧಾರವಾಡ 7, ಹಾಸನ 27, ಹಾವೇರಿ 2, ಕೊಡಗು 30, ಕೋಲಾರ 5, ಮಂಡ್ಯ 22, ಮೈಸೂರು 58, ಶಿವಮೊಗ್ಗ 14, ತುಮಕೂರು 22, ಉಡುಪಿ 39 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ 16 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಹೊಸ ಪ್ರಕರಣಗಳು ಪತ್ತೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.