ADVERTISEMENT

Covid-19 Karnataka Update: 41,457 ಹೊಸ ಪ್ರಕರಣ, 20 ಜನರು ಸಾವು 

​ಪ್ರಜಾವಾಣಿ ವಾರ್ತೆ
Published 18 ಜನವರಿ 2022, 14:55 IST
Last Updated 18 ಜನವರಿ 2022, 14:55 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಇಂದು 41,457 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 20 ಜನರು ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈವರೆಗೆ ಕೋವಿಡ್ ಪೀಡಿತರಾದವರ ಒಟ್ಟು ಸಂಖ್ಯೆ 32.88 ಲಕ್ಷಕ್ಕೆ ಏರಿಕೆಯಾಗಿದೆ. ಇಂದು 8353 ಜನರು ಗುಣಮುಖರಾಗಿದ್ದು, ಒಟ್ಟಾರೆ 29.99 ಕ್ಕೂ ಅಧಿಕ ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಸೋಂಕು ದೃಢ ಪ್ರಮಾಣವು ಶೇ 22.30 ರಷ್ಟಿದೆ. ಮರಣ ಪ್ರಮಾಣ ಶೇ 0.04 ರಷ್ಟಿದೆ. ಕೋವಿಡ್‌ನಿಂದಾಗಿ ಈವರೆಗೆ 38,465 ಜನರು ಸಾವಿಗೀಡಾಗಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಅಧಿಕ 25,595 ಮಂದಿಗೆ ಇಂದು ಕೋವಿಡ್ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 14.58 ಲಕ್ಷಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 7 ಜನರು ಸಾವಿಗೀಡಾಗುವುದರೊಂದಿಗೆ, ಒಟ್ಟು 16,465 ಜನರು ಮೃತಪಟ್ಟಿದ್ದಾರೆ.

ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 2,50,381ಕ್ಕೆ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಗರಿಷ್ಠ (1,78,328) ಸಕ್ರಿಯ ಪ್ರಕರಣಗಳಿವೆ. ಸೋಂಕಿತರಲ್ಲಿ ಇಂದು 196 ಮಂದಿ ಚೇತರಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ 7 ಮಂದಿ, ಮೈಸೂರಿನಲ್ಲಿ 3, ತುಮಕೂರಿನಲ್ಲಿ 2, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಧಾರವಾಡ, ಹಾಸನ, ರಾಮನಗರ, ಚಿತ್ರದುರ್ಗ ಮತ್ತು ಉತ್ತರ ಕನ್ನಡದಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ. ಈವರೆಗೆ ಕೋವಿಡ್‌ನಿಂದಾಗಿ ಸಾವಿಗೀಡಾದವರ ಒಟ್ಟು ಸಂಖ್ಯೆ 38,061ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.