ADVERTISEMENT

Covid-19 Karnataka Update: ರಾಜ್ಯದಲ್ಲಿಂದು 1,116 ಹೊಸ ಪ್ರಕರಣ, 8 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2021, 14:12 IST
Last Updated 15 ಸೆಪ್ಟೆಂಬರ್ 2021, 14:12 IST
   

ಬೆಂಗಳೂರು: ರಾಜ್ಯದಾದ್ಯಂತ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 1,116 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇ ವೇಳೆ ಸೋಂಕಿನಿಂದ 970 ಮಂದಿ ಗುಣಮುಖರಾಗಿದ್ದಾರೆ ಹಾಗೂ 8 ಮಂದಿ ಮೃತಪಟ್ಟಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ 15,892 ಪ್ರಕರಣಗಳು ಸಕ್ರಿಯವಾಗಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಪ್ರಕಟಿಸಿದೆ.

ಒಟ್ಟು 29,64,083 ಪ್ರಕರಣಗಳ ಪೈಕಿ 29,10,626 ಮಂದಿ ಗುಣಮುಖರಾಗಿದ್ದಾರೆ ಹಾಗೂ 37,537 ಮಂದಿ ಮೃತಪಟ್ಟಿದ್ದಾರೆ. ಕೋವಿಡ್‌ ದೃಢ ಪ್ರಮಾಣ ಶೇಕಡ 0.65 ಮತ್ತು ಕೋವಿಡ್‌ ಮೃತ ಪ್ರಮಾಣ ಶೇಕಡ 0.71 ರಷ್ಟು ವರದಿಯಾಗಿದೆ.

ADVERTISEMENT

ಬೆಂಗಳೂರಿನಲ್ಲಿ 462 ಹೊಸ ಪ್ರಕರಣಗಳು, ದಕ್ಷಿಣ ಕನ್ನಡದಲ್ಲಿ 102, ಉಡುಪಿಯಲ್ಲಿ 89, ಮೈಸೂರಿನಲ್ಲಿ 76 ಹಾಗೂ ತುಮಕೂರಿನಲ್ಲಿ 60 ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.