ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿರುವ ಬೆನ್ನಲ್ಲೇ , ಕೋವಿಡ್ನಿಯಂತ್ರಣ ತಾಂತ್ರಿಕ ಸಮಿತಿಯ ಸಲಹೆಗಳನ್ನು ಪರಿಗಣಿಸಿ ರಾಜ್ಯ ಸರ್ಕಾರ, ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅನ್ಲಾಕ್–3ಮಾರ್ಗದರ್ಶಿ ಸೂಚಿಗಳನ್ನು ಬಿಡುಗಡೆ ಮಾಡಿದೆ.
ಜುಲೈ 5ರ, ಬೆಳಿಗ್ಗೆ 5 ಗಂಟೆಯಿಂದ ಇದೇ 19ರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಗೆ ಬರುವಂತೆ ಈ ಕೆಳ ಕಾಣಿಸಿದ ಸಡಿಲಿಕೆಗಳು ಮತ್ತು ನಿರ್ಬಂಧಗಳು ಜಾರಿಯಲ್ಲಿ ಇರುತ್ತವೆಎಂದು ಸರ್ಕಾರ ಆದೇಶ ಹೊರಡಿಸಿದೆ.
ಯಾವುದೆಲ್ಲಾ ಇರುತ್ತೆ...
* ಸರ್ಕಾರಿ ಹಾಗೂ ಖಾಸಗಿ ಕಚೇರಿಗಳು ಶೇ.100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
* ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಸಂಪೂರ್ಣ ಅವಕಾಶ ನೀಡಲಾಗಿದೆ. ಶೇ.100 ರಷ್ಟು ಸಿಬ್ಬಂದಿಗಳೊಂದಿಗೆ ಕೆಲಸ ಮಾಡಲುಅವಕಾಶ ಇದೆ.
* ಶಾಪಿಂಗ್ ಮಾಲ್ಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ
* ಮೆಟ್ರೊ ಸೇರಿದಂತೆ ಬಿಎಂಟಿಸಿ, ಕೆಎಸ್ಆರ್ಟಿಸಿ, ಖಾಸಗಿ ಹಾಗೂ ಸಾರ್ವಜನಿಕ ಸಾರಿಗೆಯಲ್ಲಿ ಶೇ.100 ರಷ್ಟು ಪ್ರಯಾಣಿಕರೊಂದಿಗೆ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ.
* ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.
* ಈಜುಕೊಳಗಳಲ್ಲಿ ಕ್ರೀಡಾಪಟುಗಳುಅಭ್ಯಾಸ ಮಾಡಬಹುದು.
* ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
*ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿ ಇರುವುದಿಲ್ಲ.
*ಬಾರ್ಗಳುಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
ಯಾವುದಕ್ಕೆ ಮಿತಿ...
* ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.
* ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಮಾತ್ರ ಅವಕಾಶ.
* ಕೋವಿಡ್ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ಯಾವುದಕ್ಕೆ ಅವಕಾಶ ಇಲ್ಲ...
* ಚಿತ್ರಮಂದಿರಗಳನ್ನು ತೆರೆಯಲುಅವಕಾಶವಿಲ್ಲ.
* ಸಾಮಾಜಿಕ, ಧಾರ್ಮಿಕ,ರಾಜಕೀಯ ಸಭೆ ಸಮಾರಂಭ, ಪ್ರತಿಭಟನೆಹಾಗೂ ಇತರೆ ಸಮಾರಂಭಗಳಿಗೆಅವಕಾಶ ಇರುವುದಿಲ್ಲ
* ಪಬ್ಗಳನ್ನು ತೆರೆಯಲು ಅನುಮತಿ ನೀಡಲಾಗಿಲ್ಲ.
ಇತರೆ...
* ಜಿಲ್ಲೆಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಆಯಾ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸರ್ಕಾರಸೂಚಿಸಿದೆ.
* ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು, ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ನೀಡಿಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸರ್ಕಾರ ಮನವಿ ಮಾಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.