ADVERTISEMENT

ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಡೆಂಗಿ ಪ್ರಕರಣ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 21 ಮೇ 2022, 14:39 IST
Last Updated 21 ಮೇ 2022, 14:39 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದೆ. 10 ದಿನಗಳಲ್ಲಿ 112 ಮಂದಿಗೆ ಈ ಜ್ವರ ದೃಢಪಟ್ಟಿದ್ದು, ಡೆಂಗಿ ಪೀಡಿತರ ಒಟ್ಟು ಸಂಖ್ಯೆ 1,418ಕ್ಕೆ ಏರಿಕೆಯಾಗಿದೆ.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಡೆಂಗಿಪ್ರಕರಣಗಳು ಪತ್ತೆಯಾಗಿವೆ. 28 ಸಾವಿರಕ್ಕೂ ಅಧಿಕ ಡೆಂಗಿ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. 11 ಸಾವಿರಕ್ಕೂ ಅಧಿಕ ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ.ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 12,627 ಮಂದಿಯಲ್ಲಿ ಡೆಂಗಿ ಶಂಕೆ ವ್ಯಕ್ತವಾಗಿದ್ದು, 302 ಮಂದಿಯಲ್ಲಿ ಈ ಜ್ವರ ದೃಢಪಟ್ಟಿದೆ.ಈ ವರ್ಷ ಯಾವುದೇ ಮರಣ ಪ್ರಕರಣ ವರದಿಯಾಗಿಲ್ಲ. 2021ರಲ್ಲಿ 7,189 ಮಂದಿಡೆಂಗಿಪೀಡಿತರಾಗಿದ್ದರು. ಅವರಲ್ಲಿ ಐವರುಮೃತಪಟ್ಟಿದ್ದರು.

ಪ್ರಕರಣಗಳ ಸಂಖ್ಯೆ ಮೂರು ಜಿಲ್ಲೆಗಳಲ್ಲಿ ಮೂರಂಕಿ, 23 ಜಿಲ್ಲೆಗಳಲ್ಲಿ ಎರಡಂಕಿಯಲ್ಲಿದೆ.ಉಡುಪಿಯಲ್ಲಿ 157, ಮೈಸೂರಿನಲ್ಲಿ 142,ಕೊಪ್ಪಳದಲ್ಲಿ 89, ಚಿತ್ರದುರ್ಗದಲ್ಲಿ 85, ಬಳ್ಳಾರಿಯಲ್ಲಿ 76, ವಿಜಯಪುರದಲ್ಲಿ 56, ದಕ್ಷಿಣ ಕನ್ನಡದಲ್ಲಿ 55,ದಾವಣಗೆರೆಯಲ್ಲಿ 51,ಶಿವಮೊಗ್ಗದಲ್ಲಿ 48, ಕೋಲಾರದಲ್ಲಿ 44, ರಾಯಚೂರು ಹಾಗೂ ತುಮಕೂರಿನಲ್ಲಿ ತಲಾ 30, ಯಾದಗಿರಿಯಲ್ಲಿ 28, ಹಾವೇರಿಯಲ್ಲಿ 25, ಬಾಗಲಕೋಟೆಯಲ್ಲಿ 24 ಪ್ರಕರಣಗಳು ದೃಢಪಟ್ಟಿವೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 20ಕ್ಕಿಂತ ಕಡಿಮೆ ಇವೆ.

ADVERTISEMENT

26 ಜಿಲ್ಲೆಗಳಲ್ಲಿಚಿಕೂನ್‌ಗುನ್ಯಾ ಪ್ರಕರಣಗಳು ಪತ್ತೆಯಾಗಿದ್ದು,364 ಮಂದಿ ಈ ಜ್ವರಕ್ಕೆ ಒಳಗಾಗಿದ್ದಾರೆ. ವಿಜಯಪುರದಲ್ಲಿ 68, ಕೋಲಾರದಲ್ಲಿ 63,ಬೆಂಗಳೂರು ಗ್ರಾಮಾಂತರದಲ್ಲಿ 38,ತುಮಕೂರಿನಲ್ಲಿ 33, ಚಿತ್ರದುರ್ಗದಲ್ಲಿ 24, ದಾವಣಗೆರೆಯಲ್ಲಿ 17 ಹಾಗೂ ರಾಮನಗರದಲ್ಲಿ 13 ಪ್ರಕರಣಗಳು ವರದಿಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 10ಕ್ಕಿಂತ ಕಡಿಮೆ ಇವೆ.

‘ಅಕಾಲಿಕ ಮಳೆಯಿಂದ ಈ ಜ್ವರ ಕೆಲವರಲ್ಲಿ ಕಾಣಿಸಿಕೊಳ್ಳುತ್ತಿದೆ. ಸ್ವಚ್ಛತೆ ಸೇರಿದಂತೆ ವಿವಿಧ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು’ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರುತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.