ADVERTISEMENT

ಮಾಜಿ ಸಚಿವ ಅಂಜನಮೂರ್ತಿ ನಿಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಮಾರ್ಚ್ 2023, 7:36 IST
Last Updated 23 ಮಾರ್ಚ್ 2023, 7:36 IST
ಅಂಜನಮೂರ್ತಿ
ಅಂಜನಮೂರ್ತಿ   

ಬೆಂಗಳೂರು: ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕರಾಗಿದ್ದ ಅಂಜನಮೂರ್ತಿ (72) ಅವರು ಗುರುವಾರ ನಿಧನರಾಗಿದ್ದಾರೆ.

ಈ ಕುರಿತು ಕರ್ನಾಟಕ ಕಾಂಗ್ರೆಸ್ ಘಟಕ ಟ್ವೀಟ್ ಮಾಡಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ನಿವಾಸಿಯಾಗಿದ್ದ ಅಂಜನಮೂರ್ತಿ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೃದಯಾಘಾತವಾಗಿದ್ದರಿಂದ ಎರಡು ದಿನಗಳ ಹಿಂದೆ ಅಂಜನಮೂರ್ತಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ADVERTISEMENT

ಮೂರು ಬಾರಿ ಶಾಸಕರಾಗಿದ್ದ ಅಂಜನಮೂರ್ತಿ ವಸತಿ ಸಚಿವರಾಗಿ, ಉಪಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.