ADVERTISEMENT

ಸಂಪುಟ ರಚನೆ: ಸಂಭವನೀಯ ಸಚಿವರ ಪಟ್ಟಿಯೊಂದಿಗೆ ದೆಹಲಿಗೆ ಹೊರಟ ಸಿಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2021, 12:14 IST
Last Updated 1 ಆಗಸ್ಟ್ 2021, 12:14 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಬೆಂಗಳೂರು: ವರಿಷ್ಠರ ಜೊತೆ ಚರ್ಚಿಸಿ ಸಚಿವ ಸಂಪುಟ ರಚನೆ ಅಂತಿಮಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಸಂಜೆ ದಿಢೀರ್‌ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಸಂಭವನೀಯ ಸಚಿವರ ಪಟ್ಟಿಯನ್ನು ತಮ್ಮ ಜೊತೆ ತೆಗೆದುಕೊಂಡು ಹೊರಟಿರುವ ಮುಖ್ಯಮಂತ್ರಿ, ಹೈಕಮಾಂಡ್ ಒಪ್ಪಿಗೆ ಪಡೆದು ಸೋಮವಾರ ( ಆ. 2) ವಾಪಸಾಗಲಿದ್ದಾರೆ.

ಆರ್‌.ಟಿ. ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಭಾನುವಾರ ಸಂಜೆ ಮಾತನಾಡಿದ ಅವರು, ‘ಸಂಜೆ 5.40ರ ವಿಮಾನದಲ್ಲಿ ದೆಹಲಿಗೆ ಹೋಗುತ್ತಿದ್ದೇನೆ. ನಾಳೆ ( ಸೋಮವಾರ) ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡುತ್ತೇನೆ. ಸಚಿವ ಸಂಪುಟ ಸೇರುವವರ ಪಟ್ಟಿಯನ್ನು ಅಂತಿಮಗೊಳಿಸಿ ಮರಳುತ್ತೇನೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.