ADVERTISEMENT

ಕೋವಿಡ್‌: ಮೃತರ ಬಡ ಕುಟುಂಬದವರಿಗೆ ಎರಡು ದಿನದಲ್ಲಿ ₹ 1 ಲಕ್ಷ ಪರಿಹಾರ- ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2021, 2:34 IST
Last Updated 21 ಸೆಪ್ಟೆಂಬರ್ 2021, 2:34 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ ಬಡ ಕುಟುಂಬದವರಿಗೆ ಮುಂದಿನ ಎರಡು– ಮೂರು ದಿನಗಳಲ್ಲಿ ತಲಾ ₹1 ಲಕ್ಷ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ತಿಳಿಸಿದರು.

ಬೆಲೆ ಏರಿಕೆ ಮೇಲಿನ ಚರ್ಚೆಗೆ ಉತ್ತರಿ
ಸಿದ ಅವರು, ಈವರೆಗೆ ಒಟ್ಟು 7 ರಿಂದ 8 ಸಾವಿರ ಬಿಪಿಎಲ್‌ ಕುಟುಂಬಗಳು ನೋಂದಣಿ ಮಾಡಿವೆ. ನೇರವಾಗಿ ಅವರ ಖಾತೆಗೆ ಹಣ ಜಮೆ ಮಾಡಲಾಗುವುದು ಎಂದು ಅವರು ಹೇಳಿದರು.

ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ವಿಷಯ ಪ್ರಸ್ತಾಪಿಸಿ, ಮೃತಪಟ್ಟವ
ರಿಗೆ ತಲಾ ₹1 ಲಕ್ಷ ನೀಡುವುದಾಗಿ ಸರ್ಕಾರ ಪ್ರಕಟಿಸಿತ್ತು. ಆದರೆ, ಈವ
ರೆಗೂ ಪರಿಹಾರ ಮೊತ್ತವನ್ನು ನೀಡಿಲ್ಲ ಎಂದರು.

ADVERTISEMENT

‘ಕೋವಿಡ್‌: ಸಿಗದ ₹1 ಲಕ್ಷ ಪರಿಹಾರ’ ಎಂಬ ಶೀರ್ಷಿಕೆಯಡಿ ಈ ಬಗ್ಗೆ ‘ಪ್ರಜಾವಾಣಿ’ಯು ವಿಶೇಷ ವರದಿ ಪ್ರಕಟಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.