ADVERTISEMENT

ಪಂಚಮಸಾಲಿ ಮೀಸಲಾತಿ ಬಗ್ಗೆ ಸಂಪುಟದಲ್ಲಿ‌ ಚರ್ಚಿಸಿ ತೀರ್ಮಾನ: ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2023, 9:13 IST
Last Updated 21 ಮಾರ್ಚ್ 2023, 9:13 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಬಾಗಲಕೋಟೆ: ಪಂಚಮಸಾಲಿ ಮೀಸಲಾತಿ ಬಗ್ಗೆ‌ ಸಂಪುಟದಲ್ಲಿ‌ ಚರ್ಚಿಸಿ, ನಂತರ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಂಗಳವಾರ ಹುನಗುಂದದಲ್ಲಿ ಮೀಸಲಾತಿ ಬಗ್ಗೆ ಕೇಳಿದ ಪ್ರಶ್ನೆಗೆ ಸುದ್ದಿಗೋಷ್ಠಿಯಲ್ಲಿ ಉತ್ತರಿಸಿದ‌ ಅವರು, ಮೀಸಲಾತಿ ವಿಷಯದಲ್ಲಿ ಕಾಂಗ್ರೆಸ್ ನವರು ಅನವಶ್ಯಕ ಗೊಂದಲ ಉಂಟುಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಭರವಸೆಗಳು ಮಾತನಾಡಬಾರದು. ಕೆಲಸಗಳು ಮಾತನಾಡಬೇಕು. ಬೋಗಸ್ ಗ್ಯಾರಂಟಿ ಕಾರ್ಡ್ ನೀಡಿ ಜನರಿಗೆ ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ADVERTISEMENT

ರಾಜಸ್ಥಾನ, ಛತ್ತೀಸಗಡದಲ್ಲಿ ನಿರುದ್ಯೋಗ ಭತ್ಯೆ ನೀಡುವುದಾಗಿ ಭರವಸೆ ನೀಡಲಾಗಿತ್ತು. ಇಲ್ಲಿಯವರೆಗೆ ಈಡೇರಿಸಿಲ್ಲ. ಕರ್ನಾಟಕದ ಜನರು ಪ್ರಬುದ್ಧರಿದ್ದಾರೆ ಎಂದರು.

ಹಲಕುರ್ಕಿ ರೈತರ ಭೂಸ್ವಾಧೀನ ಕುರಿತು ಪ್ರತಿಕ್ರಿಯಿಸಿ, ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.