ADVERTISEMENT

ಹಾಸನ: ಟಾಟಾ ಸುಮೊಗೆ ಹಿಂಬದಿಯಿಂದ ಕ್ವಾಲಿಸ್ ಡಿಕ್ಕಿ, ನಾಲ್ವರ ಸಾವು

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2021, 5:05 IST
Last Updated 21 ಫೆಬ್ರುವರಿ 2021, 5:05 IST
   

ಹಾಸನ: ಹೊರವಲಯದ ಕೆಂಚಟ್ಟಹಳ್ಳಿ ಬಳಿ ಟಾಟಾ ಸುಮೋಗೆ ಹಿಂಬದಿಯಿಂದ ಕ್ವಾಲಿಸ್ ಡಿಕ್ಕಿ ಹೊಡೆದ ಪರಿಣಾಮಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ

ನಾಲ್ವರು ಮಹಿಳೆಯರು, ಮೂವರು ಮಕ್ಕಳು ಸೇರಿ 13 ಮಂದಿಗೆ ತೀವ್ರವಾಗಿ ಗಾಯಗೊಂಡಿದ್ದಾರೆ.

ಹಂಪ್ಇದ್ದ ಕಾರಣ ಟಾಟಾ ಸುಮೋ‌‌ ನಿಧಾನ ಮಾಡಿದಾಗ ಹಿಂಬದಿಯಿಂದ ಕ್ವಾಲಿಸ್ ವಾಹನ ಡಿಕ್ಕಿ ಹೊಡೆದಿದೆ.

ADVERTISEMENT

ಕೆಜಿಎಫ್ ಮೂಲದ ಪ್ರದೀಪ್ ಕುಮಾರ್, ಪುನೀತ್, ನವೀನ್ ಕುಮಾರ್, ಸುನೀಲ್ ಕುಮಾರ್, ಚಂದ್ರಶೇಖರ್ ಮೃತರು.

ಕ್ವಾಲಿಸ್ ವಾಹನದಲ್ಲಿ ಎಂಟು ಮಂದಿ ಕೆಜಿಎಫ್‌ನಿಂದ‌ ಉಡುಪಿಗೆ ಮದುವೆಗೆ ತೆರಳುತ್ತಿದ್ದರು. ಟಾಟಾ ಸುಮೋದಲ್ಲಿ ಹತ್ತು ಮಂದಿ
ಕೋಲಾರದ ಮುಳಬಾಗಿಲಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದರು.

ಗಾಯಾಳುಗಳಿಗೆ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.