ADVERTISEMENT

ನಾಳೆ ಹೆಬ್ಬಾಳ ಕ್ಷೇತ್ರದಲ್ಲಿ ಜನಸ್ಪಂದನ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2017, 10:39 IST
Last Updated 15 ಸೆಪ್ಟೆಂಬರ್ 2017, 10:39 IST
ನಾಳೆ ಹೆಬ್ಬಾಳ ಕ್ಷೇತ್ರದಲ್ಲಿ ಜನಸ್ಪಂದನ
ನಾಳೆ ಹೆಬ್ಬಾಳ ಕ್ಷೇತ್ರದಲ್ಲಿ ಜನಸ್ಪಂದನ   

ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್‌ಗಳ ಕುಂದುಕೊರತೆಗಳಿಗೆ ಪರಿಹಾರ ಕಂಡುಕೊಳ್ಳಲು ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆಗಳ ಆಶ್ರಯದಲ್ಲಿ ಇದೇ 16ರಂದು ‘ಜನಸ್ಪಂದನ–ಸಿಟಿಜನ್ಸ್‌ ಫಾರ್‌ ಚೇಂಜ್‌’ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಆರ್‌.ಟಿ.ನಗರ ಪೊಲೀಸ್‌ ನಿಲ್ದಾಣ ಬಳಿಯ ಎಚ್‌.ಎಂ.ಟಿ. ಆಟದ ಮೈದಾನದಲ್ಲಿ ಬೆಳಿಗ್ಗೆ 10ಕ್ಕೆ ಕಾರ್ಯಕ್ರಮ ನಡೆಯಲಿದೆ.

ಕ್ಷೇತ್ರದ ಶಾಸಕ ವೈ.ಎ. ನಾರಾಯಣಸ್ವಾಮಿ‌, ಕ್ಷೇತ್ರದ ವಿವಿಧ ವಾರ್ಡ್‌ಗಳ ಪಾಲಿಕೆ ಸದಸ್ಯರು, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ADVERTISEMENT

ಸಾರ್ವಜನಿಕರು ಈ ಕ್ಷೇತ್ರದ ವ್ಯಾಪ್ತಿಯ ಸಂಚಾರ, ಉದ್ಯಾನ, ಕಸ ವಿಲೇವಾರಿ ಸಮಸ್ಯೆ, ಕುಡಿಯುವ ನೀರು ಪೂರೈಕೆ ವ್ಯತ್ಯಯ ಮುಂತಾದ ಕುಂದುಕೊರತೆಗಳ ಬಗ್ಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದು.

ಕುಂದುಕೊರತೆಗಳ ಬಗ್ಗೆ ಗಮನ ಸೆಳೆಯಲು ಬಯಸುವವರು 16ರಂದು ಬೆಳಿಗ್ಗೆ 9ರಿಂದ ಸ್ಥಳದಲ್ಲೇ ಹೆಸರು ನೋಂದಾಯಿಸಬಹುದು. ಅವರಿಗೆ ಬೆಳಿಗ್ಗೆ 10ರಿಂದ ಪ್ರಶ್ನೆ ಕೇಳಲು ಅವಕಾಶ ಕಲ್ಪಿಸಲಾಗುತ್ತದೆ.

ಸಮಸ್ಯೆಗಳ ಬಗ್ಗೆ ಇಮೇಲ್‌ ( janaspandana@printersmysore.co.in) ಕೂಡ ಮಾಡಬಹುದು. ಟ್ವಿಟರ್‌ #PVJanaspandana ಮೂಲಕವೂ ಅನಿಸಿಕೆ ಹಂಚಿಕೊಳ್ಳಬಹುದು. ಮಾಹಿತಿಗೆ 9902335932 (ಬೆಳಿಗ್ಗೆ 9 ರಿಂದ ಸಂಜೆ 5ರವರೆಗೆ ಕರೆ ಮಾಡಬಹುದು).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.