ನೈರುತ್ಯ ರೈಲ್ವೆಯು ‘ಸುರಕ್ಷತಾ ಪ್ರಶಸ್ತಿ’ಗೆ ಪಾತ್ರವಾಗಿರುವುದು ಸಂತೋಷದ ಬೆಳವಣಿಗೆ. ನಮ್ಮ ರೈಲ್ವೆ ಇಲಾಖೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸೇವೆ ನೀಡುವುದರ ಜೊತೆಗೆ ಸ್ವಚ್ಛತೆಗೂ ಆದ್ಯತೆ ನೀಡುತ್ತಿದೆ. ಆದರೆ ಕೆಲ ಪ್ರಯಾಣಿಕರು ಎಲ್ಲೆಂದರಲ್ಲಿ ಕಸ ಹಾಕುವುದನ್ನು ಮುಂದುವರಿಸಿದ್ದಾರೆ. ಈ ಬಗ್ಗೆ ತಿಳಿವಳಿಕೆ ಮೂಡಿಸಲು ಇಲಾಖೆ ಸತತ ಪ್ರಯತ್ನ ನಡೆಸುತ್ತಿದ್ದರೂ ಜನರು ತಪ್ಪುಗಳನ್ನು ಮಾಡುತ್ತಲೇ ಇದ್ದಾರೆ. ಎಲ್ಲರೂ ಜಾಗೃತರಾದರೆ ರೈಲ್ವೆ ಇನ್ನಷ್ಟು ಸುರಕ್ಷಿತ ಮತ್ತು ಸ್ವಚ್ಛವಾಗುವುದರಲ್ಲಿ ಸಂದೇಹವಿಲ್ಲ.
-ಕೆ.ಜಿ. ಲಲಿತ, ಶಿವಮೊಗ್ಗ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.