ರಾಮನಗರ: ಪ್ರವಾಸೋದ್ಯಮವನ್ನೇ ನೆಚ್ಚಿಕೊಂಡ ಚನ್ನಪಟ್ಟಣದ ಗೊಂಬೆ ಉದ್ಯಮ ಲಾಕ್ಡೌನ್ ಕಾರಣಕ್ಕೆ ನೆಲಕಚ್ಚುತ್ತಿದೆ. ಕಳೆದೊಂದು ವರ್ಷದಲ್ಲಿ ಸಾವಿರಾರು ಕರಕುಶಲಕರ್ಮಿಗಳ ಬದುಕು ಬೀದಿಗೆ ಬಿದ್ದಿದೆ.
ಮೂರು ಶತಮಾನಕ್ಕೂ ಹೆಚ್ಚು ಅವಧಿಯಿಂದ ಚನ್ನಪಟ್ಟಣದಲ್ಲಿ ಗೊಂಬೆ ತಯಾರಿಕೆ ಕಲೆ ಮನೆಮನೆಗೆ ಪಸರಿಸಿದೆ. ಚೀನಿ ಆಟಿಕೆಗಳ ಆಮದಿನಿಂದ ಏಟು ತಿಂದಿದ್ದ ಈ ಉದ್ಯಮ ಈಗ ಲಾಕ್ಡೌನ್ನಿಂದ ಮತ್ತಷ್ಟು ನಷ್ಟ ಅನುಭವಿಸುತ್ತಿದೆ. ಜನಸಂಚಾರವೇ ಇಲ್ಲದ ಕಾರಣ ಬೆಂಗಳೂರು–ಮೈಸೂರು ಹೆದ್ದಾರಿ ಬದಿಯ ಟಾಯ್ಸ್ ಎಂಪೋರಿಯಂಗಳ ಬಾಗಿಲು ಮುಚ್ಚಿವೆ. ಕಲಾವಿದರು ಪರ್ಯಾಯ ವೃತ್ತಿ ಹುಡುಕಿಕೊಳ್ಳುತ್ತಿದ್ದಾರೆ. ಹತ್ತಾರು ಸಾವಿರದಷ್ಟಿದ್ದ ಕರಕುಶಲಿಗರ ಸಂಖ್ಯೆ 2–3 ಸಾವಿರಕ್ಕೆ ಇಳಿದಿದೆ.
ಬಿಡದಿ ಹಾಗೂ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲೂ ಹಿಂದಿನ ಲವಲವಿಕೆ ಇಲ್ಲ. ಅದರಲ್ಲೂ ದೊಡ್ಡ ಕಾರ್ಖಾನೆಗಳು ಉತ್ಪಾದನೆಯ ಪುನರಾರಂಭಕ್ಕೆ ತಿಣುಕಾಡುತ್ತಿವೆ. ಜಿಲ್ಲೆಯ ಹತ್ತಾರು ಗಾರ್ಮೆಂಟ್ಸ್ ಕಾರ್ಖಾನೆಗಳು ಮುಚ್ಚಿದ್ದು, ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರ ಉದ್ಯೋಗ ಕಸಿದಿದೆ.
ಇವನ್ನೂ ಓದಿ
*ಒಳನೋಟ: ಕೈಗಾರಿಕೆಗಳಿಗೆ ಪೆಟ್ಟು ನೀಡಿದ ಕೋವಿಡ್ ಎರಡನೇ ಅಲೆ; ಉತ್ಪಾದನೆ ಸ್ಥಗಿತ
*ಒಳನೋಟ: ಲಾಕ್ಡೌನ್ ಪರಿಣಾಮ; ಬೀಡಿ ಸುತ್ತುವ ಕೈಗಳಿಗೆ ಪೂರ್ಣ ಉದ್ಯೋಗವಿಲ್ಲ!
*ಒಳನೋಟ: ಲಾಕ್ಡೌನ್ ಕಾರಣ ಕಾರ್ಮಿಕರ ಕೊರತೆ; ಸಿಮೆಂಟ್ ಉತ್ಪಾದನೆ ಶೇ 50ರಷ್ಟು ಕಡಿತ
*ಒಳನೋಟ: ಗಾರ್ಮೆಂಟ್ಸ್ ಉದ್ಯಮಕ್ಕೆ ಕೋವಿಡ್ ಬರೆ
*ಒಳನೋಟ: ಜೀವ ಉಳಿಸಲೆಂದು ಜಾರಿಗೊಳಿಸಿದ ಲಾಕ್ಡೌನ್ ಉದ್ಯಮಕ್ಕೆ ಉರುಳು
*ಒಳನೋಟ: ಆಟೊಮೊಬೈಲ್ ಉದ್ಯಮಕ್ಕೆ ಲಾಕ್ಡೌನ್ ಪೆಟ್ಟು
*ಒಳನೋಟ: ಗಣಿ ಚಟುವಟಿಕೆ ಸದ್ಯ ನಿರಾಳ; ಭವಿಷ್ಯದ ಬಗ್ಗೆ ಕಳವಳ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.