ADVERTISEMENT

25 ವರ್ಷಗಳ ಹಿಂದೆ: ಮಂಗಳವಾರ 30.7.1996

​ಪ್ರಜಾವಾಣಿ ವಾರ್ತೆ
Published 29 ಜುಲೈ 2021, 19:30 IST
Last Updated 29 ಜುಲೈ 2021, 19:30 IST
   

ಕಾವೇರಿ 3 ತಿಂಗಳಲ್ಲಿ ಇತ್ಯರ್ಥ– ದೇವೇಗೌಡ

ಬೆಂಗಳೂರು, ಜುಲೈ 29– ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿಗೆ ಒಪ್ಪಿಗೆ ಆಗುವ ರೀತಿಯಲ್ಲಿ ಕಾವೇರಿ ಜಲ ವಿವಾದವನ್ನು ಇನ್ನು ಮೂರು ತಿಂಗಳಲ್ಲಿ ಬಗೆಹರಿಸುವ ಭರವಸೆಯನ್ನು ‍ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರಿಗೆ ಇಂದು ಇಲ್ಲಿ ನೀಡಿದರು.

ರಾಜಭವನದಲ್ಲಿ ಮುಖ್ಯಮಂತ್ರಿ ಜೆ.ಎಚ್. ಪಟೇಲ್, ಕಾನೂನು ಸಚಿವ ಎಂ.ಸಿ. ನಾಣಯ್ಯ ಹಾಗೂ ಭಾರಿ ನೀರಾವರಿ ಸಚಿವ ಕೆ.ಎನ್. ನಾಗೇಗೌಡ ಅವರೊಂದಿಗೆ, ಮಾತುಕತೆ ನಡೆಸಿದ ಸಂದರ್ಭದಲ್ಲಿ ಈ ಆಶ್ವಾಸನೆ ನೀಡಿ ದರು ಎಂದು ಉನ್ನತ ಮೂಲಗಳು ತಿಳಿಸಿವೆ.

ADVERTISEMENT

‘ಕಾವೇರಿ ಜಲ ವಿವಾದ ಬೀದಿಗಿಳಿದು ಬಗೆಹರಿಸುವ ವಿಚಾರ ಅಲ್ಲ. ಎರಡೂ ರಾಜ್ಯಗಳಿಗೂ ಒಪ್ಪಿಗೆ ಆಗುವ ರೀತಿಯಲ್ಲಿ ಇತ್ಯರ್ಥ ಪಡಿಸಬೇಕಾಗಿದೆ’ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಇದೇ ಸಂದರ್ಭದಲ್ಲಿ ಮೇಕೆದಾಟು ವಿದ್ಯುತ್ ಯೋಜನೆಯೂ ಪ್ರಸ್ತಾಪಕ್ಕೆ ಬಂದಿತು ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.