ಹುಬ್ಬಳ್ಳಿ ಬಂದ್ ಯಶಸ್ವಿ; ಅಶ್ರುವಾಯು, ಬಂಧನ
ಹುಬ್ಬಳ್ಳಿ, ಆ. 22– ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡು ಇದೇ ಪ್ರಥಮ ಬಾರಿಗೆ ಇಂದು ಹುಬ್ಬಳ್ಳಿಗೆ ಭೇಟಿ ನೀಡಿದ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಒಂದೆಡೆ ಜನತಾದಳ ಕಾರ್ಯಕರ್ತರಿಂದ ಶಾಂತಿಯುತ ಸ್ವಾಗತ ಪಡೆದರಾದರೂ ಮತ್ತೊಂದೆಡೆ ಅಂಗಡಿಗಳನ್ನು ಮುಚ್ಚಿ ಬಂದ್ ಆಚರಿಸಿದ ಜನತೆಯಿಂದ ಪ್ರತಿಭಟನೆ ಎದುರಿಸಬೇಕಾಯಿತು.
ಪಾಟೀಲ ಪುಟ್ಟಪ್ಪ ನೇತೃತ್ವದ ಉತ್ತರ ಕರ್ನಾಟಕ ಅಭಿವೃದ್ಧಿ ಹೋರಾಟ ಸಮಿತಿ ಮತ್ತು ಬಿಜೆಪಿ ಬೆಂಬಲಿತ ಉತ್ತರ ಕರ್ನಾಟಕ ಅಭಿವೃದ್ಧಿ ಸಂಘರ್ಷ ಸಮಿತಿ ಹುಬ್ಬಳ್ಳಿ–ಧಾರವಾಡದಲ್ಲಿ ನೈರುತ್ಯ ರೈಲ್ವೆ ವಲಯ ಹಾಗೂ ಹೈಕೋರ್ಟ್ ಪೀಠ ಸ್ಥಾಪನೆ ಸೇರಿದಂತೆ ಉತ್ತರ ಕರ್ನಾಟಕದ ಅಭಿವೃದ್ಧಿ ಕಾರ್ಯಗಳ ನಿರ್ಲಕ್ಷ್ಯವನ್ನು ಪ್ರತಿಭಟಿಸಿ ಪ್ರಧಾನಿ ಭೇಟಿ ಸಂದರ್ಭದಲ್ಲಿ ಹುಬ್ಬಳ್ಳಿ ಬಂದ್ ಹಾಗೂ ಕರಾಳ ದಿನ ಆಚರಿಸುವಂತೆ ನೀಡಿದ್ದ ಕರೆಗೆ ಪೂರ್ಣ ಬೆಂಬಲ ವ್ಯಕ್ತಗೊಂಡಿತು.
ಲಂಡನ್ನಲ್ಲಿ ಸುಖ್ರಾಂ ಪತ್ತೆ
ನವದೆಹಲಿ, ಆ. 22 (ಯುಎನ್ಐ, ಪಿಟಿಐ)– ಟೆಲಿಕಾಂ ಹಗರಣದ ಮುಖ್ಯ ಆರೋಪಿಯೆಂದು ಗುರುತಿಸಲಾಗಿರುವ ಕೇಂದ್ರದ ಮಾಜಿ ಸಚಿವ ಸುಖ್ರಾಂ ಅವರನ್ನು ಲಂಡನ್ನಲ್ಲಿ ಪತ್ತೆ ಹಚ್ಚಲಾಗಿದೆ ಎಂದು ಅಧಿಕೃತ ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.