ADVERTISEMENT

50 ವರ್ಷಗಳ ಹಿಂದೆ: ಭಾನುವಾರ, 12.9.1971

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2021, 19:31 IST
Last Updated 11 ಸೆಪ್ಟೆಂಬರ್ 2021, 19:31 IST
   

ರಾಜ್ಯದ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಪ್ರಾಶಸ್ತ್ಯ ನೀಡಲು ಬೆಳಗಾವಿ ಸಾಹಿತ್ಯ ಸಮ್ಮೇಳನ ಒತ್ತಾಯ

ಬೆಳಗಾವಿ, ಸೆ. 11– ಕನ್ನಡ ನಾಡಿನಲ್ಲಿ ಕನ್ನಡದ ಸ್ಥಾನಮಾನದ ಏಳಿಗೆಗಾಗಿ ಮೀಸಲಾದ ಒಂದು ವ್ಯವಸ್ಥಿತ ಚಳವಳಿಯ ಅಗತ್ಯ ಈಗ ಎಂದಿಗಿಂತಲೂ ಹೆಚ್ಚಾಗಿದೆ ಎಂದು ಮಾನಸಗಂಗೋತ್ರಿಯ ಕನ್ನಡ ಅಧ್ಯಯನ ಸಂಸ್ಥೆಯ ಮುಖ್ಯಸ್ಥರಾದ ಡಾ. ಹಾ.ಮಾ.ನಾಯಕ್ ಅವರು ಇಂದು ಸಂಜೆ ಇಲ್ಲಿ ಹೇಳಿದರು.

ತಿಳಕವಾಡಿಯ ಕಲಾಮಂದಿರದಲ್ಲಿ ಪ್ರಾರಂಭವಾದ ಎರಡು ದಿನಗಳ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಭಾಷಣ ಮಾಡಿದ ಶ್ರೀಯುತರು, ಹಿಂದಿ ಹಾಗೂ ಇಂಗ್ಲಿಷ್‌ ಪ್ರಭಾವ ಬೆಳೆಯುತ್ತಿರುವ ಬಗ್ಗೆ ವ್ಯಸನ ವ್ಯಕ್ತಪಡಿಸಿ ಇದರಿಂದ ಕನ್ನಡದ ಅಸ್ತಿತ್ವಕ್ಕೆ ಗಂಡಾಂತರ ಬರುವಂತಿದೆ. ರಾಜ್ಯದಲ್ಲಿನ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಪ್ರಾಶಸ್ತ್ರ್ಯಸಿಗಬೇಕಾದ ಅಗತ್ಯದ ಕುರಿತು ಒತ್ತಿ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.