ADVERTISEMENT

25 ವರ್ಷಗಳ ಹಿಂದೆ: ಶನಿವಾರ 24.8.1996

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2021, 19:12 IST
Last Updated 23 ಆಗಸ್ಟ್ 2021, 19:12 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಕಾಶ್ಮೀರ: ವಿಶ್ವಾಸ ಸ್ಥಾಪನೆಗೆ ಯತ್ನ– ದೇವೇಗೌಡ

ಬೆಂಗಳೂರು, ಆ. 23– ಸಂಯುಕ್ತ ರಂಗ ಸರ್ಕಾರಕ್ಕೆ ಜಮ್ಮು–ಕಾಶ್ಮೀರದಲ್ಲಿ ಹಿಂದೆ ಇದ್ದ ಒಳ್ಳೆಯ ವಾತಾವರಣ ಸೃಷ್ಟಿಸಿ ಜನತೆಯಲ್ಲಿ ವಿಶ್ವಾಸ ಪುನರ್ಪ್ರತಿಷ್ಠಾಪಿಸುವ ಬಗ್ಗೆ ಕಾಳಜಿ ಇದೆಯೇ ಹೊರತು ಅಲ್ಲಿನ ವಿಧಾನಸಭಾ ಚುನಾವಣೆಯಲ್ಲಿ ಯಾವ
ಪಕ್ಷ ಗೆಲ್ಲುತ್ತದೆ ಎಂಬುದರಲ್ಲಿ ಅಲ್ಲ ಎಂದು ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಇಂದು ಇಲ್ಲಿ ಸ್ಪಷ್ಟಪಡಿಸಿದರು.

ಹುಬ್ಬಳ್ಳಿಯಲ್ಲಿ ಚಳವಳಿ ತೀವ್ರ: ಬಿಜೆಪಿ ಘೋಷಣೆ

ADVERTISEMENT

ಹುಬ್ಬಳ್ಳಿ, ಆ. 23– ಹುಬ್ಬಳ್ಳಿಗೆ ಭೇಟಿ ನೀಡಿದ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ನೈರುತ್ಯ ರೈಲ್ವೆ ವಲಯ ಹಾಗೂ ಹೈಕೋರ್ಟ್ ಪೀಠ ಸ್ಥಾಪನೆ ಸೇರಿದಂತೆ ಈ ಭಾಗದ ಪ್ರಮುಖ ಬೇಡಿಕೆಗಳ ಬಗ್ಗೆ ತುಟಿ ಬಿಚ್ಚದ ಹಿನ್ನೆಲೆಯಲ್ಲಿ ಚಳವಳಿಯನ್ನು
ಇನ್ನಷ್ಟು ಉಗ್ರಗೊಳಿಸಲಾಗುವುದು ಎಂದು ಬಿಜೆಪಿ ಇಂದು ಇಲ್ಲಿ ಘೋಷಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.