ADVERTISEMENT

‘ಬೊಬ್ಬೆ’ ಪ‍ದ ಬಳಕೆ ಅಗತ್ಯವಿರಲಿಲ್ಲ

​ಪ್ರಜಾವಾಣಿ ವಾರ್ತೆ
Published 12 ಮೇ 2021, 19:31 IST
Last Updated 12 ಮೇ 2021, 19:31 IST

‘ಎರಡನೇ ಡೋಸ್‌ಗೆ ಲಸಿಕೆ ಬರಲು ಆರಂಭವಾಗಿದೆ. ಅದಕ್ಕಾಗಿ ಗಾಬರಿ ಬಿದ್ದು, ರಾತ್ರಿ ವೇಳೆ ಸರದಿಯಲ್ಲಿ ನಿಂತು ಬೊಬ್ಬೆ ಹೊಡೆಯುವ ಅಗತ್ಯವಿಲ್ಲ’ ಎಂದು ಮುಖ್ಯಮಂತ್ರಿ ಹೇಳಿರುವುದು ಹಿರಿಯ ನಾಗರಿಕರಿಗೆ ಆಘಾತವನ್ನುಂಟು ಮಾಡಿದೆ. ಹಿರಿಯ ನಾಗರಿಕರು ಸರ್ಕಾರದ ಆದೇಶವನ್ನು ಪಾಲಿಸಲು ಮತ್ತು ರೋಗ ಹರಡುವುದನ್ನು ತಡೆಗಟ್ಟಲು ಜವಾಬ್ದಾರಿಯುತರಾಗಿ ಸರದಿಯಲ್ಲಿ ನಿಲ್ಲುತ್ತಿದ್ದಾರೆ. ಅಂತಹವರಿಗೆ ‘ಬೊಬ್ಬೆ’ ಎಂಬ ಪದವನ್ನು ಉಪಯೋಗಿಸದೆ, ನಮ್ಮ ಸುಂದರವಾದ ಕನ್ನಡ ಭಾಷೆಯಲ್ಲಿ ‘ಲಸಿಕೆಯು ಸರ್ವರಿಗೂ ಲಭ್ಯವಾಗುತ್ತದೆ’ ಎಂದು ಹೇಳಿಕೆ ಕೊಟ್ಟಿದ್ದರೆ ಸಾಕಿತ್ತು.

-ರಾ.ಬಾ.ವರದರಾಜನ್, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT