ADVERTISEMENT

ಬೇಡಿ ಪಡೆಯುವ ಪ್ರಶಸ್ತಿಗೆ ಬೀಳಲಿ ಕಡಿವಾಣ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2021, 19:30 IST
Last Updated 3 ಸೆಪ್ಟೆಂಬರ್ 2021, 19:30 IST

ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿದ್ದರೂ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದೆಂದು ಕನ್ನಡ ಮತ್ತು ಸಂಸ್ಕೃತಿ ಸಚಿವರು ಹೇಳಿದ್ದಾರೆ. ಇದೊಂದು ಉತ್ತಮ ಬೆಳವಣಿಗೆ. ಇದೇ ರೀತಿ, ಸರ್ಕಾರದ ವತಿಯಿಂದ ನೀಡಲಾಗುವ ಎಲ್ಲ ಪ್ರಶಸ್ತಿಗಳಿಗೂ ಅರ್ಜಿ ಹಾಕುವ ಚಾಳಿ ನಿಲ್ಲಬೇಕು. ಎಲೆ ಮರೆಯ ಕಾಯಿಯಂತೆ ಅನೇಕರು ಉತ್ತಮ ಸಾಧನೆ ಮಾಡಿದ್ದಾರೆ. ಇವರು ಯಾವ ಪ್ರಶಸ್ತಿಗೂ ಅರ್ಜಿ ಹಾಕುವ ಮನಸ್ಸು ಮಾಡುವುದಿಲ್ಲ. ಇಂತಹವರನ್ನು ಗುರುತಿಸಿ ಪ್ರಶಸ್ತಿ ನೀಡುವ ಕಾರ್ಯವಾಗಬೇಕು. ಪ್ರಶಸ್ತಿಗಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಅವರಿವರನ್ನು ಕಾಡಿ ಬೇಡಿ ಪ್ರಶಸ್ತಿ ಪಡೆಯುವವರಿಗೆ ಕಡಿವಾಣ ಹಾಕಬೇಕು.

-ಸಾ.ಮ.ಶಿವಮಲ್ಲಯ್ಯ, ಸಾಸಲಾಪುರ, ಕನಕಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT