ADVERTISEMENT

ಉಪನ್ಯಾಸಕ್ಕೆ ವಿರೋಧ ಅನಗತ್ಯ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2019, 20:15 IST
Last Updated 14 ಅಕ್ಟೋಬರ್ 2019, 20:15 IST

ಸಿಪಿಐ ಯುವ ಮುಖಂಡ ಕನ್ಹಯ್ಯ ಕುಮಾರ್‌ ಅವರ, ಗುಲಬರ್ಗಾ ವಿಶ್ವವಿದ್ಯಾಲಯದ ಡಾ. ಬಿ.ಆರ್.ಅಂಬೇಡ್ಕರ್ ಅಧ್ಯಯನ ಸಂಸ್ಥೆಯಲ್ಲಿನ ಉಪನ್ಯಾಸ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತವಾದುದು ಸರಿಯಲ್ಲ. ಏಕೆಂದರೆ, ಉಪನ್ಯಾಸ ನೀಡುವವರು ಬಲಪಂಥೀಯರೇ ಆಗಿರಲಿ ಎಡಪಂಥೀಯರೇ ಆಗಿರಲಿ ತಮ್ಮ ವಿಚಾರವನ್ನು ವ್ಯಕ್ತಪಡಿಸಲು ಭಾರತದ ಸಂವಿಧಾನ ಅವಕಾಶ ಕಲ್ಪಿಸಿದೆ. ಅಷ್ಟಕ್ಕೂ ಕನ್ಹಯ್ಯ ಒಬ್ಬ ಯುವ ಎಡಪಂಥೀಯ ಮುಖಂಡರೇ ವಿನಾ ಭಯೋತ್ಪಾದಕರೋ ಅಥವಾ ನಕ್ಸಲೀಯರೋ ಅಲ್ಲ.

ದೇಶದ ಅನೇಕ ಟಿ.ವಿ. ವಾಹಿನಿಗಳು ಕನ್ಹಯ್ಯ ಅವರನ್ನು ಚರ್ಚೆಗೆ ಆಹ್ವಾನಿಸಿ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ನೀಡಿರುವುದನ್ನು ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಇದು ಪ್ರಜಾಪ್ರಭುತ್ವ ದೇಶ. ಇಲ್ಲಿ ಪ್ರಜೆಗಳೇ ಪ್ರಭುಗಳು ಎಂಬುದನ್ನು ಮರೆಯಬಾರದು. ಪ್ರತಿಯೊಬ್ಬ ಪ್ರಜೆಯೂ ತನ್ನ ಅಭಿಪ್ರಾಯ ವ್ಯಕ್ತಪಡಿಸಲು ಸಂವಿಧಾನಬದ್ಧ ಹಕ್ಕನ್ನು ಹೊಂದಿರುತ್ತಾನೆ.

– ಭೀಮಾಶಂಕರ ಹಳಿಸಗರ, ಶಹಾಪುರ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.