ADVERTISEMENT

ಅರ್ಜಿಯಿಲ್ಲದೇ ಪ್ರಶಸ್ತಿ: ಸ್ವಾಗತಾರ್ಹ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2021, 19:31 IST
Last Updated 31 ಆಗಸ್ಟ್ 2021, 19:31 IST

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಈ ವರ್ಷ ಅರ್ಜಿ ಹಾಕದಿದ್ದರೂ ಅರ್ಹ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಅವರು ಹೇಳಿರುವುದು ಸ್ವಾಗತಾರ್ಹ. ನಿಜವಾದ ಸಾಧಕರು ಪ್ರಶಸ್ತಿಗಾಗಿ ಅರ್ಜಿ ಹಾಕಲು ಮುಜುಗರದಿಂದ ಹಿಂದೇಟು ಹಾಕುತ್ತಾರೆ. ಕೆಲವರು ಅರ್ಜಿ ಹಾಕಿ, ಲಾಬಿ ಮಾಡಿ ಪ್ರಶಸ್ತಿ ಗಿಟ್ಟಿಸಿಕೊಳ್ಳುತ್ತಾರೆ. ಹಾಗಾಗಿ ಎಷ್ಟೋ ಜನ ಅರ್ಹರು ಈ ಪ್ರಶಸ್ತಿಯಿಂದ ವಂಚಿತರಾಗಿದ್ದಾರೆ. ಈ ವರ್ಷವಾದರೂ ಸಚಿವರ ಈ ನಿರ್ಧಾರ ಕಟ್ಟುನಿಟ್ಟಾಗಿ ಜಾರಿಗೆ ಬಂದು ಅರ್ಹರು ಪ್ರಶಸ್ತಿ ಪಡೆಯುವಂತಾಗಲಿ.

ಚಾವಲ್ಮನೆ ಸುರೇಶ್ ನಾಯಕ್, ಹಾಲ್ಮತ್ತೂರು, ಕೊಪ್ಪ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT