ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಕನ್ನಡ ಕಲಿಯಲು ಮುಂದಾಗಿರುವ ಸುದ್ದಿ ತಿಳಿದು ನನಗೆ ಬಹಳ ಆಶ್ಚರ್ಯ ಹಾಗೂ ಸಂತೋಷವಾಯಿತು.
ರಾಜ್ಯಪಾಲರು ಮೂಲತಃ ಮಧ್ಯಪ್ರದೇಶದವರು. ಅವರು ಅಧಿಕಾರ ಸ್ವೀಕರಿಸಿ ಕೆಲವೇ ದಿನಗಳಾಗಿದ್ದು, ಕನ್ನಡ ಕಲಿಕೆಗೆ ಆಸಕ್ತಿ ತೋರಿರುವುದು ಸ್ವಾಗತಾರ್ಹ ಬೆಳವಣಿಗೆ. ಅಷ್ಟೇ ಅಲ್ಲದೆ ಪ್ರತಿದಿನ ಅಧಿಕಾರಿಗಳು ಹಾಗೂ ಅವರ ಸಿಬ್ಬಂದಿ ಜೊತೆ ಕನ್ನಡದಲ್ಲೇ ಮಾತನಾಡುವ ಪ್ರಯತ್ನವನ್ನು ಸಹ ಮಾಡುತ್ತಿರುವುದು ಕನ್ನಡ ಭಾಷೆಯ ಮೇಲೆ ಅವರಿಗಿರುವ ಪ್ರೀತಿ ಹಾಗೂ ಗೌರವವನ್ನು ತೋರಿಸುತ್ತದೆ.
ಕರ್ನಾಟಕದಲ್ಲಿ ಇದ್ದುಕೊಂಡು ಇನ್ನೂ ಕನ್ನಡ ಭಾಷೆಯನ್ನು ಕಲಿಯದ ಕನ್ನಡೇತರ ಅಧಿಕಾರಿಗಳಿಗೆ ಗೆಹಲೋತ್ ಮಾದರಿಯಾಗಿದ್ದಾರೆ.
-ಎಲ್.ಎಸ್.ಶಿವಮೂರ್ತಿ,ಬೆಂಗಳೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.