ADVERTISEMENT

ಪ್ಯಾಕೇಜ್ ಹಣ: ಬೇಕು ಹೆಚ್ಚುವರಿ ಕೌಂಟರ್

​ಪ್ರಜಾವಾಣಿ ವಾರ್ತೆ
Published 16 ಜೂನ್ 2021, 19:30 IST
Last Updated 16 ಜೂನ್ 2021, 19:30 IST

ಲಾಕ್‌ಡೌನ್‌ ಕಾರಣದಿಂದ ಶ್ರಮಿಕ ವರ್ಗಕ್ಕೆ ಸರ್ಕಾರ ಇತ್ತೀಚೆಗೆ ಘೋಷಿಸಿರುವ ವಿಶೇಷ ಪ್ಯಾಕೇಜ್‌ನ ಹಣ ಇನ್ನು ಕೆಲವೇ ದಿನಗಳಲ್ಲಿ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗುವ ಸಾಧ್ಯತೆ ಇದೆ. ಈ ಹಣವನ್ನು ಪಡೆದುಕೊಳ್ಳಲು ಫಲಾನುಭವಿಗಳು ಒಂದೇ ಸಮಯದಲ್ಲಿ ಬ್ಯಾಂಕಿಗೆ ತೆರಳುವ ಸಾಧ್ಯತೆ ಹೆಚ್ಚಾಗಿ ಇರುವುದರಿಂದ, ಜನಸಂದಣಿ ಉಂಟಾಗಿ ಮಾರಕ ಕೋವಿಡ್-19 ಉಲ್ಬಣಗೊಳ್ಳಬಹುದು. ಹೀಗಾಗಿ, ಬ್ಯಾಂಕುಗಳಲ್ಲಿ ತಾತ್ಕಾಲಿಕವಾಗಿ ಹೆಚ್ಚುವರಿ ಕೌಂಟರ್‌ಗಳನ್ನು ತೆರೆದು ಫಲಾನುಭವಿಗಳಿಗೆ ನಗದನ್ನು ವಿತರಿಸಬೇಕು. ಆಗ ಕೋವಿಡ್ ನಿಯಮಾವಳಿಗಳನ್ನು ಪಾಲಿಸುವುದರ ಜೊತೆಗೆ ಫಲಾನುಭವಿಗಳಿಗೆ ಶೀಘ್ರದಲ್ಲಿ ನಗದನ್ನು ವಿತರಿಸಿದಂತೆಯೂ ಆಗುತ್ತದೆ.

– ಸುನೀಲ್ ಕುಮಾರ್ ಬಿ.ಎಸ್.,ಬನ್ನೂರು, ಟಿ.ನರಸೀಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT